<p>ಬೆಂಗಳೂರು: ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಆರೋಪದಡಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>'ಆನಂದ್ಕುಮಾರ್ ಅಲಿಯಾಸ್ ನಂದ (18), ಸಂತೋಷ್ ಕುಮಾರ್ (18), ಜಿ. ನಿತಿನ್ ಅಲಿಯಾಸ್ ಬಿಳೆ (20) ಹಾಗೂ ಎನ್. ನಿತಿನ್ಕುಮಾರ್ (18) ಬಂಧಿತರು. ಇನ್ನೊಬ್ಬ ಬಾಲಕ’ ಎಂದು ಪೊಲೀಸರು ಹೇಳಿದರು.</p>.<p>‘ಬಂಧಿತರ ಪೈಕಿ ಮೂವರು ಕಾಲೇಜು ವಿದ್ಯಾರ್ಥಿಗಳು. ಇಬ್ಬರು ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. ಇವರಿಂದ ಎರಡು ದ್ವಿಚಕ್ರ ವಾಹನ, ಮೊಬೈಲ್ ಹಾಗೂ ₹ 18,600 ನಗದು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ದಿಲೀಪ್ಕುಮಾರ್ ಹಾಗೂ ರಂಜಿತ್ ಅವರು ಏಪ್ರಿಲ್ 1ರಂದು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೊರಟಿದ್ದರು. ಬೇಗೂರು ರಸ್ತೆಯ ಮುತ್ತುಗದಹಳ್ಳಿಯ ಕಾಲೇಜೊಂದರ ರಸ್ತೆಯಲ್ಲಿ ಬೈಕ್ ಅಡ್ಡಗಟ್ಟಿದ್ದ ಆರೋಪಿಗಳು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾಗಿದ್ದರು.’</p>.<p>‘ಸುಲಿಗೆ ಬಗ್ಗೆ ದಿಲೀಪ್ಕುಮಾರ್ ಅವರು ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮತ್ತಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿಯೂ ಇದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಆರೋಪದಡಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>'ಆನಂದ್ಕುಮಾರ್ ಅಲಿಯಾಸ್ ನಂದ (18), ಸಂತೋಷ್ ಕುಮಾರ್ (18), ಜಿ. ನಿತಿನ್ ಅಲಿಯಾಸ್ ಬಿಳೆ (20) ಹಾಗೂ ಎನ್. ನಿತಿನ್ಕುಮಾರ್ (18) ಬಂಧಿತರು. ಇನ್ನೊಬ್ಬ ಬಾಲಕ’ ಎಂದು ಪೊಲೀಸರು ಹೇಳಿದರು.</p>.<p>‘ಬಂಧಿತರ ಪೈಕಿ ಮೂವರು ಕಾಲೇಜು ವಿದ್ಯಾರ್ಥಿಗಳು. ಇಬ್ಬರು ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿದ್ದರು. ಇವರಿಂದ ಎರಡು ದ್ವಿಚಕ್ರ ವಾಹನ, ಮೊಬೈಲ್ ಹಾಗೂ ₹ 18,600 ನಗದು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ದಿಲೀಪ್ಕುಮಾರ್ ಹಾಗೂ ರಂಜಿತ್ ಅವರು ಏಪ್ರಿಲ್ 1ರಂದು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೊರಟಿದ್ದರು. ಬೇಗೂರು ರಸ್ತೆಯ ಮುತ್ತುಗದಹಳ್ಳಿಯ ಕಾಲೇಜೊಂದರ ರಸ್ತೆಯಲ್ಲಿ ಬೈಕ್ ಅಡ್ಡಗಟ್ಟಿದ್ದ ಆರೋಪಿಗಳು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾಗಿದ್ದರು.’</p>.<p>‘ಸುಲಿಗೆ ಬಗ್ಗೆ ದಿಲೀಪ್ಕುಮಾರ್ ಅವರು ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮತ್ತಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿಯೂ ಇದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>