ರಾಯಚೂರು: ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭರವಸೆ ನೀಡಿದರು ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ತಿಳಿಸಿದರು.
ಜಿಲ್ಲೆಯ ಸಿಂಧನೂರು ನಗರದಲ್ಲಿ ಭಾನುವಾರ ನಡೆದ ಕಪ್ಪು ಬಾವುಟ ಪ್ರದರ್ಶನ ಹಿನ್ನೆಲೆಯಲ್ಲಿ, ದಲಿತ ಮುಖಂಡರನ್ನು ಸರ್ಕಿಟ್ ಹೌಸ್ಗೆ ಆಹ್ವಾನಿಸಿ ಸೋಮವಾರ ಬೆಳಿಗ್ಗೆ ರಾಹುಲ್ ಗಾಂಧಿ ಅವರು ಮಾತುಕತೆ ನಡೆಸಿದರು.
ರಾಹುಲ್ ಗಾಂಧಿ ಅವರು ಪ್ರತ್ಯೇಕವಾಗಿ ದಲಿತ ಮುಖಂಡರೊಂದಿಗೆ 10 ನಿಮಿಷ ಮಾತನಾಡಿದರು. ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಅಸ್ಪೃಶ್ಯ ಜಾತಿಗಳ ಮುಖಂಡರಿಗೆ ಆದ್ಯತೆ ಮೇರೆಗೆ ಟಿಕೆಟ್ ನೀಡುತ್ತೇವೆ ಎನ್ನುವ ಭರವಸೆ ಕೂಡಾ ನೀಡಿದ್ದಾರೆ ಎಂದರು.
ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ, ರವೀಂದ್ರ ಪಟ್ಟಿ ಮತ್ತಿತರರು ಮಾತುಕತೆಗೆ ಹೋಗಿದ್ದರು.