‘ರೋಗಿ ಇಲ್ಲದಿದ್ದರೂ ಚಾಲಕ ಸೈರನ್ ಹಾಕಿಕೊಂಡು ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಆಂಬುಲೆನ್ಸ್ ಚಲಾಯಿಸಿದ್ದ. ರಸ್ತೆಯಲ್ಲಿ ಹೊರಟಿದ್ದ ನಾಗೇಂದ್ರ ಹಾಗೂ ಪ್ರಕಾಶ್ ಅವರಿಗೆ ಆಂಬುಲೆನ್ಸ್ ಗುದ್ದಿತ್ತು. ತೀವ್ರ ಗಾಯಗೊಂಡ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗೇಂದ್ರ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಪೊಲೀಸರು ತಿಳಿಸಿದರು.