<p><strong>ರಾಜರಾಜೇಶ್ವರಿನಗರ:</strong> ‘ರಾಜ್ಯದಲ್ಲಿಯೇ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯು ಕೋವಿಡ್ ನಿರ್ವಹಣೆಯಲ್ಲಿ ಮಾದರಿ ಕಾರ್ಯ ಮಾಡುತ್ತಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘಿಸಿದರು.</p>.<p>ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಾಗರಿಕರಿಗೆ ದಿನಸಿ ಕಿಟ್ ಮತ್ತು ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರ ವಿತರಿಸಿ ಮಾತನಾಡಿದ ಅವರು, ‘ಪಂಚಾಯಿತಿಯು ಅಂಗವಿಕಲರಿಗೆ ₹10 ಸಾವಿರ, ಆಶಾ ಕಾರ್ಯಕರ್ತರಿಗೆ ₹5 ಸಾವಿರ, ಅಂಗನವಾಡಿ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿ, ಆಂಬುಲೆನ್ಸ್ ಚಾಲಕರು ಮತ್ತು ಸಹಾಯಕರಿಗೆ ತಲಾ ₹3 ಸಾವಿರ ಸಹಾಯಧನ ಮತ್ತು ಸಾನಿಟೈಸರ್, ಮಾಸ್ಕ್, ವೈದ್ಯಕೀಯ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>‘ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದಲೂ ಗ್ರಾಮೀಣ ಪ್ರದೇಶದ ಜನರಿಗೆ ಸಹಾಯಹಸ್ತ ಚಾಚುವ ಮೂಲಕ ನೋವಿನಲ್ಲಿರುವವರಿಗೆ ಸಹಾಯ ಮಾಡಬೇಕಾಗಿದೆ’ ಎಂದು ಹೇಳಿದರು.</p>.<p>ಚಿಕ್ಕನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸೂಲಿವಾರ ಬಿ. ಬಸವರಾಜು, ‘ಸಚಿವ ಎಸ್.ಟಿ.ಸೋಮಶೇಖರ್ ಅವರು ವಿವಿಧ ರೀತಿಯಲ್ಲಿ ವೈಯಕ್ತಿಕವಾಗಿ ಎಲ್ಲ ರೀತಿಯ ಸಹಾಯ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯಿಂದಲೂ ನಾಗರಿಕರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಸದಸ್ಯರುಗಳೆಲ್ಲ ತೀರ್ಮಾನಿಸಿ ಈ ಕಾರ್ಯ ಹಮ್ಮಿಕೊಂಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ‘ರಾಜ್ಯದಲ್ಲಿಯೇ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯು ಕೋವಿಡ್ ನಿರ್ವಹಣೆಯಲ್ಲಿ ಮಾದರಿ ಕಾರ್ಯ ಮಾಡುತ್ತಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘಿಸಿದರು.</p>.<p>ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಾಗರಿಕರಿಗೆ ದಿನಸಿ ಕಿಟ್ ಮತ್ತು ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರ ವಿತರಿಸಿ ಮಾತನಾಡಿದ ಅವರು, ‘ಪಂಚಾಯಿತಿಯು ಅಂಗವಿಕಲರಿಗೆ ₹10 ಸಾವಿರ, ಆಶಾ ಕಾರ್ಯಕರ್ತರಿಗೆ ₹5 ಸಾವಿರ, ಅಂಗನವಾಡಿ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿ, ಆಂಬುಲೆನ್ಸ್ ಚಾಲಕರು ಮತ್ತು ಸಹಾಯಕರಿಗೆ ತಲಾ ₹3 ಸಾವಿರ ಸಹಾಯಧನ ಮತ್ತು ಸಾನಿಟೈಸರ್, ಮಾಸ್ಕ್, ವೈದ್ಯಕೀಯ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>‘ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದಲೂ ಗ್ರಾಮೀಣ ಪ್ರದೇಶದ ಜನರಿಗೆ ಸಹಾಯಹಸ್ತ ಚಾಚುವ ಮೂಲಕ ನೋವಿನಲ್ಲಿರುವವರಿಗೆ ಸಹಾಯ ಮಾಡಬೇಕಾಗಿದೆ’ ಎಂದು ಹೇಳಿದರು.</p>.<p>ಚಿಕ್ಕನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸೂಲಿವಾರ ಬಿ. ಬಸವರಾಜು, ‘ಸಚಿವ ಎಸ್.ಟಿ.ಸೋಮಶೇಖರ್ ಅವರು ವಿವಿಧ ರೀತಿಯಲ್ಲಿ ವೈಯಕ್ತಿಕವಾಗಿ ಎಲ್ಲ ರೀತಿಯ ಸಹಾಯ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯಿಂದಲೂ ನಾಗರಿಕರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಸದಸ್ಯರುಗಳೆಲ್ಲ ತೀರ್ಮಾನಿಸಿ ಈ ಕಾರ್ಯ ಹಮ್ಮಿಕೊಂಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>