‘ವಿದ್ಯಾವಿನಾಯಕ’ ಧಾರಾವಾಹಿ ಯಲ್ಲಿ ನಟಿಸಿರುವ ಕಿರುತೆರೆ ನಟ ದಿಲೀಪ್ ಶೆಟ್ಟಿ ಅವರ ಕಾರು ಹಾಗೂ ತಿಪ್ಪೆಸ್ವಾಮಿ ಎಂಬುವರು ಚಲಾಯಿಸುತ್ತಿದ್ದ ಕಾರಿನ ನಡುವೆ ಶುಕ್ರವಾರ ತಡರಾತ್ರಿ ಅಪಘಾತ ಸಂಭವಿಸಿದೆ’ ಎಂದು ಚಿಕ್ಕಪೇಟೆ ಸಂಚಾರ ಪೊಲೀಸರು ಹೇಳಿದರು. ‘ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದ ತಿಪ್ಪೆಸ್ವಾಮಿ, ನನ್ನ ಕಾರಿಗೆ ಡಿಕ್ಕಿ ಹೊಡೆಸಿದ್ದಾರೆ’ ಎಂದುದಿಲೀಪ್ ಶೆಟ್ಟಿ ದೂರು ನೀಡಿದ್ದಾರೆ. ಅದರನ್ವಯ ತಿಪ್ಪೆಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.