<p><strong>ಬೆಂಗಳೂರು</strong>: ಸನಾತನ ಧರ್ಮದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೂಡಲಿ-ಶೃಂಗೇರಿ ಸಂಸ್ಥಾನದ ಅಭಿನವ ಶಂಕರ ಭಾರತಿ ಸ್ವಾಮೀಜಿ ಹೇಳಿದರು.</p>.<p>ಚಾಮರಾಜಪೇಟೆಯ ಚಂದ್ರಶೇಖರ ಭಾರತೀಯ ಕಲ್ಯಾಣಮಂಟಪದಲ್ಲಿ ಮೈಲಾರಲಿಂಗೇಶ್ವರ ಟ್ರಸ್ಟ್ ಆಯೋಜಿಸಿದ್ದ 21ನೇ ವರ್ಷದ ಚಿಕ್ಕಯ್ಯ-ದೊಡ್ಡಯ್ಯ ಪೂಜಾ ಮಹೋತ್ಸವ, ಮೈಲಾರಿ ಹೋಮ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ಭಕ್ತಿ ಮಾರ್ಗದಲ್ಲಿ ಸಾಗುವ ಮೂಲಕ ಸಂಸ್ಕೃತಿ, ಆಚಾರ, ವಿಚಾರಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.</p>.<p>ಆನಂದವನ ಅಗಡಿ ಕ್ಷೇತ್ರದ ಗುರುದತ್ತ ಸ್ವಾಮೀಜಿ ಚಕ್ರವರ್ತಿ ಮಾತನಾಡಿ, ‘ಬೆಂಗಳೂರಿನಲ್ಲಿ ಭವ್ಯವಾದ ಮೈಲಾರಲಿಂಗೇಶ್ವರ ದೇವಸ್ಥಾನ ನಿರ್ಮಾಣವಾಗಬೇಕು. ಅದು ಸುಕ್ಷೇತ್ರವಾಗಬೇಕು. ಈ ನಿಟ್ಟಿನಲ್ಲಿ ಭಕ್ತರು ದೃಢ ಹೆಜ್ಜೆ ಇಡಬೇಕು’ ಎಂದು ಹೇಳಿದರು.</p>.<p>ವಿದ್ಯಾವಿಶ್ವೇಶ್ವರ ಭಾರತಿ ಸ್ವಾಮೀಜಿ, ಬ್ರಹ್ಮಾನಂದತೀರ್ಥ ಸ್ವಾಮೀಜಿ, ದತ್ತಾವಧೂತ ಮಹಾರಾಜ, ಶಾಸಕರಾದ ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಸಂಸದ ತೇಜಸ್ವಿ ಸೂರ್ಯ, ಅದಮ್ಯ ಚೇತನ ಟ್ರಸ್ಟ್ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸನಾತನ ಧರ್ಮದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೂಡಲಿ-ಶೃಂಗೇರಿ ಸಂಸ್ಥಾನದ ಅಭಿನವ ಶಂಕರ ಭಾರತಿ ಸ್ವಾಮೀಜಿ ಹೇಳಿದರು.</p>.<p>ಚಾಮರಾಜಪೇಟೆಯ ಚಂದ್ರಶೇಖರ ಭಾರತೀಯ ಕಲ್ಯಾಣಮಂಟಪದಲ್ಲಿ ಮೈಲಾರಲಿಂಗೇಶ್ವರ ಟ್ರಸ್ಟ್ ಆಯೋಜಿಸಿದ್ದ 21ನೇ ವರ್ಷದ ಚಿಕ್ಕಯ್ಯ-ದೊಡ್ಡಯ್ಯ ಪೂಜಾ ಮಹೋತ್ಸವ, ಮೈಲಾರಿ ಹೋಮ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ಭಕ್ತಿ ಮಾರ್ಗದಲ್ಲಿ ಸಾಗುವ ಮೂಲಕ ಸಂಸ್ಕೃತಿ, ಆಚಾರ, ವಿಚಾರಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.</p>.<p>ಆನಂದವನ ಅಗಡಿ ಕ್ಷೇತ್ರದ ಗುರುದತ್ತ ಸ್ವಾಮೀಜಿ ಚಕ್ರವರ್ತಿ ಮಾತನಾಡಿ, ‘ಬೆಂಗಳೂರಿನಲ್ಲಿ ಭವ್ಯವಾದ ಮೈಲಾರಲಿಂಗೇಶ್ವರ ದೇವಸ್ಥಾನ ನಿರ್ಮಾಣವಾಗಬೇಕು. ಅದು ಸುಕ್ಷೇತ್ರವಾಗಬೇಕು. ಈ ನಿಟ್ಟಿನಲ್ಲಿ ಭಕ್ತರು ದೃಢ ಹೆಜ್ಜೆ ಇಡಬೇಕು’ ಎಂದು ಹೇಳಿದರು.</p>.<p>ವಿದ್ಯಾವಿಶ್ವೇಶ್ವರ ಭಾರತಿ ಸ್ವಾಮೀಜಿ, ಬ್ರಹ್ಮಾನಂದತೀರ್ಥ ಸ್ವಾಮೀಜಿ, ದತ್ತಾವಧೂತ ಮಹಾರಾಜ, ಶಾಸಕರಾದ ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಸಂಸದ ತೇಜಸ್ವಿ ಸೂರ್ಯ, ಅದಮ್ಯ ಚೇತನ ಟ್ರಸ್ಟ್ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>