<p><strong>ಬೆಂಗಳೂರು</strong>: ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ 5 ವರ್ಷದ ಮಗು ಅಪಹರಣ ಪ್ರಕರಣವನ್ನು 24 ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ.</p>.<p>ನಗರದ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ವಾಸವಾಗಿರುವ ರಾಯಚೂರು ಮೂಲದ ಸಿದ್ದಪ್ಪ, ವೀರಮ್ಮ ದಂಪತಿ ಅವರ ಐದು ವರ್ಷದ ಮಗು ಜೂನ್ 21 ರಂದು ನಾಪತ್ತೆಯಾಗಿತ್ತು.</p>.<p>ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರೂ ಮಗುವಿನ ಸುಳಿವು ದೊರೆಯದ ಕಾರಣ ಪಾಲಕರು ಪೊಲೀಸ್ ಠಾಣೆಗೆ ದೂರು ನೀಡಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆದರೆ, ಅಂದು ಬೆಸ್ಕಾಂ ಕಾಮಗಾರಿ ನಡೆಯುತ್ತಿರುವ ಕಾರಣ ಬೆಳಿಗ್ಗೆಯಿಂದ ಸಂಜೆವರೆಗೆ ಆ ಪ್ರದೇಶದಲ್ಲಿ ವಿದ್ಯುತ್ ಇಲ್ಲದ ಪರಿಣಾಮ ಸಿಸಿಟಿವಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸಿರಲಿಲ್ಲ.</p>.<p>ಶ್ವಾನದಳದ ನೆರವಿನೊಂದಿಗೆ ಪೊಲೀಸರು ಪತ್ತೆ ಕಾರ್ಯ ಆರಂಭಿಸಿದರು. ಮಗುವಿನ ಬಟ್ಟೆಯ ವಾಸನೆಯ ಜಾಡು ಹಿಡಿದು ಶೋಧಕಾರ್ಯ ಕೈಗೊಳ್ಳಲಾಯಿತು. ಶ್ವಾನವು ಮಗು ನಾಪತ್ತೆಯಾದ ಸ್ಥಳದಿಂದ ಅರ್ಧ ಕಿ.ಮೀ. ದೂರದ ಬಸಮ್ಮ ಎಂಬುವರ ಮನೆ ಬಳಿ ಕರೆದುಕೊಂಡು ಹೋಗಿತ್ತು.</p>.<p>‘ಬಸಮ್ಮಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಗು ಕಳ್ಳತನದ ವಿಚಾರ ತಿಳಿಸಿದಳು. ರಾಯಚೂರು ಜಿಲ್ಲೆಯ ಬಸಮ್ಮ, ಮಗುವಿನ ತಂದೆ-ತಾಯಿ ಪರಿಚಿತಳು. ವಿಚಾರಣೆ ವೇಳೆ ಮಗು ಅಪಹರಿಸಿಕೊಂಡು ಹೋಗಿರುವ ವಿಷಯ ತಿಳಿಸಿದಳು. ಸದ್ಯ ರಾಯಚೂರಿನಲ್ಲಿ ಆರೋಪಿಗಳನ್ನು ಬಂಧಿಸಿ, ಮಗು ರಕ್ಷಣೆ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿ ಮಗುವನ್ನು ನಗರಕ್ಕೆ ಕರೆತರುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>ಆರೋಪಿಗಳನ್ನು ನಗರಕ್ಕೆ ಕರೆತಂದ ಬಳಿಕ ವಿಚಾರಣೆಗೆ ಒಳಪಡಿಸಲಾಗುವುದು. ಬಳಿಕ ಕಾರಣ ಗೊತ್ತಾಗಲಿದೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಹೆಚ್ಚಿನ ಮಾಹಿತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ 5 ವರ್ಷದ ಮಗು ಅಪಹರಣ ಪ್ರಕರಣವನ್ನು 24 ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ.</p>.<p>ನಗರದ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ವಾಸವಾಗಿರುವ ರಾಯಚೂರು ಮೂಲದ ಸಿದ್ದಪ್ಪ, ವೀರಮ್ಮ ದಂಪತಿ ಅವರ ಐದು ವರ್ಷದ ಮಗು ಜೂನ್ 21 ರಂದು ನಾಪತ್ತೆಯಾಗಿತ್ತು.</p>.<p>ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರೂ ಮಗುವಿನ ಸುಳಿವು ದೊರೆಯದ ಕಾರಣ ಪಾಲಕರು ಪೊಲೀಸ್ ಠಾಣೆಗೆ ದೂರು ನೀಡಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆದರೆ, ಅಂದು ಬೆಸ್ಕಾಂ ಕಾಮಗಾರಿ ನಡೆಯುತ್ತಿರುವ ಕಾರಣ ಬೆಳಿಗ್ಗೆಯಿಂದ ಸಂಜೆವರೆಗೆ ಆ ಪ್ರದೇಶದಲ್ಲಿ ವಿದ್ಯುತ್ ಇಲ್ಲದ ಪರಿಣಾಮ ಸಿಸಿಟಿವಿ ಕ್ಯಾಮೆರಾಗಳು ಕಾರ್ಯ ನಿರ್ವಹಿಸಿರಲಿಲ್ಲ.</p>.<p>ಶ್ವಾನದಳದ ನೆರವಿನೊಂದಿಗೆ ಪೊಲೀಸರು ಪತ್ತೆ ಕಾರ್ಯ ಆರಂಭಿಸಿದರು. ಮಗುವಿನ ಬಟ್ಟೆಯ ವಾಸನೆಯ ಜಾಡು ಹಿಡಿದು ಶೋಧಕಾರ್ಯ ಕೈಗೊಳ್ಳಲಾಯಿತು. ಶ್ವಾನವು ಮಗು ನಾಪತ್ತೆಯಾದ ಸ್ಥಳದಿಂದ ಅರ್ಧ ಕಿ.ಮೀ. ದೂರದ ಬಸಮ್ಮ ಎಂಬುವರ ಮನೆ ಬಳಿ ಕರೆದುಕೊಂಡು ಹೋಗಿತ್ತು.</p>.<p>‘ಬಸಮ್ಮಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಗು ಕಳ್ಳತನದ ವಿಚಾರ ತಿಳಿಸಿದಳು. ರಾಯಚೂರು ಜಿಲ್ಲೆಯ ಬಸಮ್ಮ, ಮಗುವಿನ ತಂದೆ-ತಾಯಿ ಪರಿಚಿತಳು. ವಿಚಾರಣೆ ವೇಳೆ ಮಗು ಅಪಹರಿಸಿಕೊಂಡು ಹೋಗಿರುವ ವಿಷಯ ತಿಳಿಸಿದಳು. ಸದ್ಯ ರಾಯಚೂರಿನಲ್ಲಿ ಆರೋಪಿಗಳನ್ನು ಬಂಧಿಸಿ, ಮಗು ರಕ್ಷಣೆ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿ ಮಗುವನ್ನು ನಗರಕ್ಕೆ ಕರೆತರುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>ಆರೋಪಿಗಳನ್ನು ನಗರಕ್ಕೆ ಕರೆತಂದ ಬಳಿಕ ವಿಚಾರಣೆಗೆ ಒಳಪಡಿಸಲಾಗುವುದು. ಬಳಿಕ ಕಾರಣ ಗೊತ್ತಾಗಲಿದೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಹೆಚ್ಚಿನ ಮಾಹಿತಿ ನೀಡುವುದಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>