<p><strong>ಬೆಂಗಳೂರು</strong>: ವಿಜಯನಗರ ಉಪ ವಿಭಾಗದ ಮಾಗಡಿ ರಸ್ತೆ, ಗೋವಿಂದರಾಜನಗರ ಹಾಗೂ ವಿಜಯನಗರ ಪೊಲೀಸ್ ಠಾಣೆಗಳಲ್ಲಿ ‘ಮಕ್ಕಳ ಸ್ನೇಹಿ ಕೊಠಡಿ’ ನಿರ್ಮಿಸಲಾಗಿದ್ದು, ಈ ಕೊಠಡಿಗಳು ಎಲ್ಲರ ಗಮನ ಸೆಳೆಯುತ್ತಿವೆ.</p><p>ಗೃಹ ಸಚಿವ ಜಿ.ಪರಮೇಶ್ವರ ಅವರ ಸೂಚನೆಯ ಮೇರೆಗೆ ಮೊದಲ ಹಂತದಲ್ಲಿ ನಗರದ ಮೂರು ಠಾಣೆಗಳಲ್ಲಿ ಮಕ್ಕಳ ಸ್ನೇಹಿ ಕೊಠಡಿ ನಿರ್ಮಿಸಲಾಗಿದೆ. ಹಂತಹಂತವಾಗಿ ಇನ್ನೂ ಕೆಲವು ಪೊಲೀಸ್ ಠಾಣೆಗಳಲ್ಲಿ ಈ ರೀತಿಯ ಕೊಠಡಿ ನಿರ್ಮಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.</p><p>‘ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕೊಠಡಿ ನಿರ್ಮಿಸಲಾಗಿದೆ. ಸಾರ್ವಜನಿಕರು ಮಕ್ಕಳ ಜತೆಗೆ ಠಾಣೆಗೆ ಭೇಟಿ ನೀಡುವ ಸಂದರ್ಭಗಳಲ್ಲಿ ಮಕ್ಕಳ ಗಮನ ಸೆಳೆಯುವ ವಾತಾವರಣ ನಿರ್ಮಿಸಲಾಗಿದೆ’ ಎಂದು ಹೇಳಿದರು.</p><p>ವಿಜಯನಗರ ಠಾಣೆಯ ಪಿಎಸ್ಐ ನೇತ್ರಾವತಿ, ಮಾಗಡಿ ರಸ್ತೆ ಠಾಣೆಯ ಪಿಎಸ್ಐ ಮಂಜುನಾಥ್, ಗೋವಿಂದರಾಜನಗರ ಠಾಣೆಯ ಪಿಎಸ್ಐ ಮಹೇಶ್ ಬ್ಯಾಕೋಡು ಅವರ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಜಯನಗರ ಉಪ ವಿಭಾಗದ ಮಾಗಡಿ ರಸ್ತೆ, ಗೋವಿಂದರಾಜನಗರ ಹಾಗೂ ವಿಜಯನಗರ ಪೊಲೀಸ್ ಠಾಣೆಗಳಲ್ಲಿ ‘ಮಕ್ಕಳ ಸ್ನೇಹಿ ಕೊಠಡಿ’ ನಿರ್ಮಿಸಲಾಗಿದ್ದು, ಈ ಕೊಠಡಿಗಳು ಎಲ್ಲರ ಗಮನ ಸೆಳೆಯುತ್ತಿವೆ.</p><p>ಗೃಹ ಸಚಿವ ಜಿ.ಪರಮೇಶ್ವರ ಅವರ ಸೂಚನೆಯ ಮೇರೆಗೆ ಮೊದಲ ಹಂತದಲ್ಲಿ ನಗರದ ಮೂರು ಠಾಣೆಗಳಲ್ಲಿ ಮಕ್ಕಳ ಸ್ನೇಹಿ ಕೊಠಡಿ ನಿರ್ಮಿಸಲಾಗಿದೆ. ಹಂತಹಂತವಾಗಿ ಇನ್ನೂ ಕೆಲವು ಪೊಲೀಸ್ ಠಾಣೆಗಳಲ್ಲಿ ಈ ರೀತಿಯ ಕೊಠಡಿ ನಿರ್ಮಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.</p><p>‘ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕೊಠಡಿ ನಿರ್ಮಿಸಲಾಗಿದೆ. ಸಾರ್ವಜನಿಕರು ಮಕ್ಕಳ ಜತೆಗೆ ಠಾಣೆಗೆ ಭೇಟಿ ನೀಡುವ ಸಂದರ್ಭಗಳಲ್ಲಿ ಮಕ್ಕಳ ಗಮನ ಸೆಳೆಯುವ ವಾತಾವರಣ ನಿರ್ಮಿಸಲಾಗಿದೆ’ ಎಂದು ಹೇಳಿದರು.</p><p>ವಿಜಯನಗರ ಠಾಣೆಯ ಪಿಎಸ್ಐ ನೇತ್ರಾವತಿ, ಮಾಗಡಿ ರಸ್ತೆ ಠಾಣೆಯ ಪಿಎಸ್ಐ ಮಂಜುನಾಥ್, ಗೋವಿಂದರಾಜನಗರ ಠಾಣೆಯ ಪಿಎಸ್ಐ ಮಹೇಶ್ ಬ್ಯಾಕೋಡು ಅವರ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>