<p><strong>ಬೆಂಗಳೂರು: </strong>ನಗರದಲ್ಲಿ ಮಕ್ಕಳನ್ನು ಕದ್ದು ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಮಹಿಳೆಯರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ದೇವಿ ಹಾಗೂ ಮುಂಬೈನ ರಂಜಿತಾ ಬಂಧಿತರು. ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ದೇವಿ, ಶಿವಾಜಿನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ರಂಜಿತಾ ಜೊತೆ ನಿರಂತರವಾಗಿ ಒಡನಾಟವಿಟ್ಟುಕೊಂಡು ಕೃತ್ಯ ಎಸಗುತ್ತಿದ್ದಳು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪಿಯುಸಿ ವ್ಯಾಸಂಗ ಮಾಡಿದ್ದ ರಂಜಿತಾ, ಮಕ್ಕಳಾಗದವರಿಗಾಗಿ ಬಾಡಿಗೆ ತಾಯಂದಿರನ್ನು ಹುಡುಕುವ ಕೆಲಸ ಮಾಡುತ್ತಿದ್ದಳು. ಅದರಿಂದಾಗಿ ಹಲವು ಜನರು ಆಕೆಗೆ ಪರಿಚಯವಾಗಿದ್ದರು. ದೇವಿ ಜೊತೆ ಸೇರಿ ತನ್ನದೇ ಜಾಲ ರೂಪಿಸಿಕೊಂಡು ಮಕ್ಕಳ ಮಾರಾಟ ಮಾಡಲಾರಂಭಿಸಿದ್ದಳು’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ಚಾಮರಾಜಪೇಟೆಯಲ್ಲಿ ಮಗು ಕದ್ದಿದ್ದರು; ಚಾಮರಾಜಪೇಟೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ಮೇನಲ್ಲಿ ಹುಸ್ನಾಬಾನು ಎಂಬುವರ ಗಂಡು ಮಗು ಕಳುವಾಗಿತ್ತು. ಈ ಪ್ರಕರಣ ಸಹ ದಾಖಲಾಗಿತ್ತು. ಆದರೆ, ಆರೋಪಿಗಳು ಸಿಕ್ಕಿರಲಿಲ್ಲ. ನೊಂದ ಪೋಷಕರು, ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು.</p>.<p>ಪ್ರಕರಣ ಗಂಭೀರವಾಗುತ್ತಿದ್ದಂತೆ ಎಚ್ಚೆತ್ತ ದಕ್ಷಿಣ ವಿಭಾಗದ ಪೊಲೀಸರು, ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ಮಕ್ಕಳನ್ನು ಖರೀದಿ ಮಾಡುವ ಸೋಗಿನಲ್ಲೇ ಕಾರ್ಯಾಚರಣೆ ನಡೆಸಿ ರೈಲು ನಿಲ್ದಾಣದಲ್ಲೇ ದೇವಿಯನ್ನು ಬಂಧಿಸಿದ್ದಾರೆ. ಆಕೆ ನೀಡಿದ್ದ ಹೇಳಿಕೆ ಆಧರಿಸಿ ರಂಜಿತಾಳನ್ನು ಸೆರೆ ಹಿಡಿದಿದ್ದಾರೆ.</p>.<p class="Subhead">ಆಸ್ಪತ್ರೆ, ಕೊಳಗೇರಿಯಲ್ಲಿ ಮಕ್ಕಳ ಕಳವು: ‘ಆಸ್ಪತ್ರೆಯಲ್ಲಿ ಜನಿಸುತ್ತಿದ್ದ ಮಕ್ಕಳು ಹಾಗೂ ಕೊಳಗೇರಿಯಲ್ಲಿರುತ್ತಿದ್ದ ಮಕ್ಕಳನ್ನೇ ಆರೋಪಿಗಳು ಕಳವು ಮಾಡುತ್ತಿದ್ದರು. ಪೋಷಕರು ಬಡವರಾಗಿರುವುದರಿಂದ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಕ್ಕೆ ಹೆಚ್ಚು ಹೋಗುವುದಿಲ್ಲವೆಂದು ಆರೋಪಿಗಳು ತಿಳಿದುಕೊಂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಕ್ಕಳಿಲ್ಲದ ಶ್ರೀಮಂತರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ‘ಬಾಡಿಗೆ ತಾಯಂದಿರಿಂದ ಮಗು ಪಡೆಯಲು ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ನಮ್ಮದೇ ಸಂಬಂಧಿಕರ ಮಕ್ಕಳಿದ್ದು, ಅವರಿಗೆ ಸಾಕಲು ಆಗುವುದಿಲ್ಲ. ಕಡಿಮೆ ಮೊತ್ತಕ್ಕೆ ಮಕ್ಕಳನ್ನು ಮಾರುತ್ತಿದ್ದಾರೆ’ ಎನ್ನುತ್ತಿದ್ದರು. ಅದನ್ನು ನಂಬಿ ಹಲವರು ಮಕ್ಕಳನ್ನು ಖರೀದಿಸಿದ್ದಾರೆ. ಆ ಮಕ್ಕಳನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p>‘ಆರ್ಥಿಕ ಸಂಕಷ್ಟದಲ್ಲಿದ್ದ ಕೆಲ ಪೋಷಕರಿಗೆ ₹ 1 ಲಕ್ಷದಿಂದ ₹ 2 ಲಕ್ಷ ಕೊಟ್ಟು ಮಕ್ಕಳನ್ನು ಆರೋಪಿಗಳೇ ಖರೀದಿ ಮಾಡಿರುವ ಮಾಹಿತಿ ಇದೆ. ಅದೇ ಮಕ್ಕಳನ್ನು ₹ 8 ಲಕ್ಷದಿಂದ ₹ 10 ಲಕ್ಷಕ್ಕೆ ಮಾರಾಟ ಮಾಡಿರುವ ಸಂಗತಿಯೂ ತನಿಖೆಯಿಂದ ಗೊತ್ತಾಗಿದೆ. ಮಕ್ಕಳ ಮಾರಾಟ ಜಾಲದಲ್ಲಿ ಮತ್ತಷ್ಟು ಜನ ಭಾಗಿಯಾಗಿದ್ದಾರೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಮಕ್ಕಳನ್ನು ಕದ್ದು ಹೊರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಮಹಿಳೆಯರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ದೇವಿ ಹಾಗೂ ಮುಂಬೈನ ರಂಜಿತಾ ಬಂಧಿತರು. ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ದೇವಿ, ಶಿವಾಜಿನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ರಂಜಿತಾ ಜೊತೆ ನಿರಂತರವಾಗಿ ಒಡನಾಟವಿಟ್ಟುಕೊಂಡು ಕೃತ್ಯ ಎಸಗುತ್ತಿದ್ದಳು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪಿಯುಸಿ ವ್ಯಾಸಂಗ ಮಾಡಿದ್ದ ರಂಜಿತಾ, ಮಕ್ಕಳಾಗದವರಿಗಾಗಿ ಬಾಡಿಗೆ ತಾಯಂದಿರನ್ನು ಹುಡುಕುವ ಕೆಲಸ ಮಾಡುತ್ತಿದ್ದಳು. ಅದರಿಂದಾಗಿ ಹಲವು ಜನರು ಆಕೆಗೆ ಪರಿಚಯವಾಗಿದ್ದರು. ದೇವಿ ಜೊತೆ ಸೇರಿ ತನ್ನದೇ ಜಾಲ ರೂಪಿಸಿಕೊಂಡು ಮಕ್ಕಳ ಮಾರಾಟ ಮಾಡಲಾರಂಭಿಸಿದ್ದಳು’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ಚಾಮರಾಜಪೇಟೆಯಲ್ಲಿ ಮಗು ಕದ್ದಿದ್ದರು; ಚಾಮರಾಜಪೇಟೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ಮೇನಲ್ಲಿ ಹುಸ್ನಾಬಾನು ಎಂಬುವರ ಗಂಡು ಮಗು ಕಳುವಾಗಿತ್ತು. ಈ ಪ್ರಕರಣ ಸಹ ದಾಖಲಾಗಿತ್ತು. ಆದರೆ, ಆರೋಪಿಗಳು ಸಿಕ್ಕಿರಲಿಲ್ಲ. ನೊಂದ ಪೋಷಕರು, ಹೈಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು.</p>.<p>ಪ್ರಕರಣ ಗಂಭೀರವಾಗುತ್ತಿದ್ದಂತೆ ಎಚ್ಚೆತ್ತ ದಕ್ಷಿಣ ವಿಭಾಗದ ಪೊಲೀಸರು, ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ಮಕ್ಕಳನ್ನು ಖರೀದಿ ಮಾಡುವ ಸೋಗಿನಲ್ಲೇ ಕಾರ್ಯಾಚರಣೆ ನಡೆಸಿ ರೈಲು ನಿಲ್ದಾಣದಲ್ಲೇ ದೇವಿಯನ್ನು ಬಂಧಿಸಿದ್ದಾರೆ. ಆಕೆ ನೀಡಿದ್ದ ಹೇಳಿಕೆ ಆಧರಿಸಿ ರಂಜಿತಾಳನ್ನು ಸೆರೆ ಹಿಡಿದಿದ್ದಾರೆ.</p>.<p class="Subhead">ಆಸ್ಪತ್ರೆ, ಕೊಳಗೇರಿಯಲ್ಲಿ ಮಕ್ಕಳ ಕಳವು: ‘ಆಸ್ಪತ್ರೆಯಲ್ಲಿ ಜನಿಸುತ್ತಿದ್ದ ಮಕ್ಕಳು ಹಾಗೂ ಕೊಳಗೇರಿಯಲ್ಲಿರುತ್ತಿದ್ದ ಮಕ್ಕಳನ್ನೇ ಆರೋಪಿಗಳು ಕಳವು ಮಾಡುತ್ತಿದ್ದರು. ಪೋಷಕರು ಬಡವರಾಗಿರುವುದರಿಂದ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಕ್ಕೆ ಹೆಚ್ಚು ಹೋಗುವುದಿಲ್ಲವೆಂದು ಆರೋಪಿಗಳು ತಿಳಿದುಕೊಂಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಕ್ಕಳಿಲ್ಲದ ಶ್ರೀಮಂತರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ‘ಬಾಡಿಗೆ ತಾಯಂದಿರಿಂದ ಮಗು ಪಡೆಯಲು ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ನಮ್ಮದೇ ಸಂಬಂಧಿಕರ ಮಕ್ಕಳಿದ್ದು, ಅವರಿಗೆ ಸಾಕಲು ಆಗುವುದಿಲ್ಲ. ಕಡಿಮೆ ಮೊತ್ತಕ್ಕೆ ಮಕ್ಕಳನ್ನು ಮಾರುತ್ತಿದ್ದಾರೆ’ ಎನ್ನುತ್ತಿದ್ದರು. ಅದನ್ನು ನಂಬಿ ಹಲವರು ಮಕ್ಕಳನ್ನು ಖರೀದಿಸಿದ್ದಾರೆ. ಆ ಮಕ್ಕಳನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p>‘ಆರ್ಥಿಕ ಸಂಕಷ್ಟದಲ್ಲಿದ್ದ ಕೆಲ ಪೋಷಕರಿಗೆ ₹ 1 ಲಕ್ಷದಿಂದ ₹ 2 ಲಕ್ಷ ಕೊಟ್ಟು ಮಕ್ಕಳನ್ನು ಆರೋಪಿಗಳೇ ಖರೀದಿ ಮಾಡಿರುವ ಮಾಹಿತಿ ಇದೆ. ಅದೇ ಮಕ್ಕಳನ್ನು ₹ 8 ಲಕ್ಷದಿಂದ ₹ 10 ಲಕ್ಷಕ್ಕೆ ಮಾರಾಟ ಮಾಡಿರುವ ಸಂಗತಿಯೂ ತನಿಖೆಯಿಂದ ಗೊತ್ತಾಗಿದೆ. ಮಕ್ಕಳ ಮಾರಾಟ ಜಾಲದಲ್ಲಿ ಮತ್ತಷ್ಟು ಜನ ಭಾಗಿಯಾಗಿದ್ದಾರೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>