ಬೆಂಗಳೂರು: ‘ಪ್ರಜಾವಾಣಿ’ ಫೆ.6 ಸಂಚಿಕೆಯ ಆಳ–ಅಗಲದಲ್ಲಿ ‘ಬಾಲ್ಯ ವಿವಾಹ ತಡೆ ಸರ್ಕಾರಕ್ಕೆ ಅಸಡ್ಡೆ, ಜನರಿಗೆ ಬೇಕಿಲ್ಲ’ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿ ಆಧರಿಸಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಬಾಲ್ಯ ವಿವಾಹಗಳ ಕಟ್ಟುನಿಟ್ಟಿನ ತಡೆಗೆ ಇನ್ನಷ್ಟು ನಿಗಾವಹಿಸು
ವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ನಿರ್ದೇಶಕರಿಗೆ ಪತ್ರ ಬರೆದಿದೆ.