ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬರೀ ಓದು ಎನ್ನುತ್ತೀರಾ‘ ಎಂದು ಮನೆ ಬಿಟ್ಟು ಹೋಗಿದ್ದ ಬೆಂಗಳೂರಿನ ಮಕ್ಕಳು ಪತ್ತೆ

Last Updated 11 ಅಕ್ಟೋಬರ್ 2021, 5:56 IST
ಅಕ್ಷರ ಗಾತ್ರ

ಬೆಂಗಳೂರು: '‘ಬರೀ ಓದು ಎನ್ನುತ್ತೀರಾ, ಆದರೆ, ನಾವು ಕ್ರೀಡೆಯಲ್ಲಿ ಸಾಧನೆ ಮಾಡಿ, ಹೆಸರು ಹಾಗೂ‌ ಹಣ ಸಂಪಾದನೆ‌ ಮಾಡುತ್ತೇವೆ' ಎಂದು ಪತ್ರ ಬರೆದಿಟ್ಟು ಭಾನುವಾರ ನಾಪತ್ತೆಯಾಗಿದ್ದ‌ ಮಕ್ಕಳು, ನಗರದ ಆನಂದರಾವ್‌ ವೃತ್ತದಲ್ಲಿ ಸೋಮವಾರ ನಸುಕಿನಲ್ಲಿ ಪತ್ತೆಯಾಗಿದ್ದಾರೆ.

ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ‌ವಾಸವಿದ್ದ ಮೂವರು ಮಕ್ಕಳಾದ ಪರೀಕ್ಷಿತ್, ನಂದನ್ ಹಾಗೂ ಕಿರಣ್, ವಾಯುವಿಹಾರಕ್ಕೆ‌ ಹೋಗಿ ಬರುವುದಾಗಿ‌‌ ಹೇಳಿ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ಗಾಬರಿಗೊಂಡಿದ್ದ ಪೋಷಕರು ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಗಂಭೀರವಾಗಿದ್ದರಿಂದ‌ ಮಕ್ಕಳ ಪತ್ತೆಗಾಗಿ‌ ವಿಶೇಷ ತಂಡ ರಚಿಸಲಾಗಿತ್ತು.

'ಭಾನುವಾರ‌ ಮೈಸೂರಿಗೆ ಹೋಗಿದ್ದರು ಎನ್ನಲಾದ ಮಕ್ಕಳು, ಅಲ್ಲಿಂದ ತಡರಾತ್ರಿ ಬೆಂಗಳೂರಿಗೆ ವಾಪಸು ಬಂದಿದ್ದರು. ಆನಂದರಾವ್ ವೃತ್ತದ ಬಳಿ‌ ನಸುಕಿನಲ್ಲಿ ಸುತ್ತಾಡುತ್ತಿದ್ದರು. ಅವರನ್ನು ಚಿಂದಿ ಆಯುವ ವ್ಯಕ್ತಿಯೊಬ್ಬರು ಮಾತನಾಡಿಸಿದ್ದರು. ಆದರೆ, ಮಕ್ಕಳು ಮಾತನಾಡದೇ ಓಡಿ ಹೋಗಿದ್ದರು. ಅನುಮಾನಗೊಂಡ ಚಿಂದಿ ಆಯುವ ವ್ಯಕ್ತಿ, ಸಮೀಪದಲ್ಲೇ ಇದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿಗೆ ವಿಷಯ ತಿಳಿಸಿದ್ದರು' ಎಂದು ಪೊಲೀಸರು ಹೇಳಿದರು.

'ಮಕ್ಕಳ ಬಳಿ ಹೋಗಿದ್ದ ಪೊಲೀಸರು, ಮೂವರನ್ನೂ ಮಾತನಾಡಿಸಿದ್ದರು. ಮನೆ ಬಿಟ್ಟು ಬಂದಿರುವುದಾಗಿ ಮಕ್ಕಳು ಹೇಳಿದ್ದರು. ನಂತರ, ಪೊಲೀಸರು ನಿಯಂತ್ರಣ ‌ಕೊಠಡಿಗೆ ಕರೆ‌ ಮಾಡಿ ಮಾಹಿತಿ ನೀಡಿದ್ದರು. ಬಾಗಲಗುಂಟೆ ಠಾಣೆ ವ್ಯಾಪ್ತಿಯಿಂದ ‌ಕಾಣೆಯಾಗಿದ್ದ‌ ಮಕ್ಕಳು ಇವರೇ ಎಂಬುದು ಖಾತ್ರಿಯಾಯಿತು' ಎಂದೂ ತಿಳಿಸಿದರು.

'ಮೂವರು ಮಕ್ಕಳು, ಎಸ್ಸೆಸ್ಸೆಲ್ಸಿ ಓದುತ್ತಿದ್ದರು. ಅವರನ್ನು ಪೋಷಕರ ಸುಪರ್ದಿಗೆ ವಹಿಸುವ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ' ಎಂದೂ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT