<p><strong>ಬೆಂಗಳೂರು: </strong>ಮಕ್ಕಳ ಹಕ್ಕುಗಳ ರಾಯಭಾರಿಯನ್ನಾಗಿ ‘ಕೇರ್ ಆಫ್ ಫುಟ್ಪಾತ್’ ಸಿನಿಮಾ ಖ್ಯಾತಿಯ ಕಿಶನ್ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೇಮಕ ಮಾಡಿದೆ.</p>.<p>‘ಈ ಅವಕಾಶ ನೀಡಿದ್ದಕ್ಕಾಗಿ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಕೊಳಚೆ ಪ್ರದೇಶಗಳಲ್ಲಿ ಬೆಳೆಯುವ ಮಕ್ಕಳಿಗೆ ಹಲವು ಸೌಲಭ್ಯಗಳು ಸಿಗುತ್ತಿಲ್ಲ. ಶಿಕ್ಷಣದಿಂದಲೂ ವಂಚಿತರಾಗುತ್ತಿದ್ದಾರೆ. ಸಮಾಜದಲ್ಲಿ ಮಾನವೀಯ ಸಂಬಂಧಗಳು ಬಲಗೊಳ್ಳಬೇಕು. ಮಕ್ಕಳ ಬಾಲ್ಯವನ್ನು ರಕ್ಷಿಸುವ ಕೆಲಸವಾಗಬೇಕು’ ಎಂದು ಕಿಶನ್ ಅಭಿಪ್ರಾಯಪಟ್ಟರು.</p>.<p>ಆಯೋಗದ ಅಧ್ಯಕ್ಷ ಡಾ. ಆಂಟೋನಿ ಸೆಬಾಸ್ಟಿಯನ್, ‘ಆಯೋಗದ ರಾಯಭಾರಿಯಾಗಿ ಕಾರ್ಯನಿರ್ವಹಿಸಲು ಮುಂದೆ ಬಂದಿರುವ ಕಿಶನ್ ಅವರ ಸಾಮಾಜಿಕ ಹೊಣೆಗಾರಿಕೆ ಮೆಚ್ಚುವಂಥದ್ದು’ ಎಂದರು.</p>.<p>ಸುಮಾರು 200 ದೇಶಗಳ ರಾಷ್ಟ್ರಗೀತೆಗಳನ್ನು ಹಾಡುವ ಮೂಲಕ ದೇಶದ ಗಮನ ಸೆಳೆದಿರುವ ಮಾಸ್ಟರ್ ಯಥಾರ್ಥ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.</p>.<p>ದಕ್ಷಿಣ ಭಾರತದ ಯುನಿಸೆಫ್ ಪ್ರತಿನಿಧಿ ಸೋನಿ ಕುಟ್ಟಿ ಜಾರ್ಜ್, ಆಯೋಗದ ಸದಸ್ಯರಾದ ಎಂ.ಎಲ್. ಪರಶುರಾಮ, ಡಿ. ಶಂಕ್ರಪ್ಪ, ಎಚ್.ಸಿ. ರಾಘವೇಂದ್ರ, ಅಶೋಕ ಯರಗಟ್ಟಿ, ಭಾರತಿ ಹಾಗೂ ಆಯೋಗದ ಕಾರ್ಯದರ್ಶಿ ಇಂದಿರಾ, ಸಹಾಯಕ ನಿರ್ದೇಶಕಿ ಕವಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಕ್ಕಳ ಹಕ್ಕುಗಳ ರಾಯಭಾರಿಯನ್ನಾಗಿ ‘ಕೇರ್ ಆಫ್ ಫುಟ್ಪಾತ್’ ಸಿನಿಮಾ ಖ್ಯಾತಿಯ ಕಿಶನ್ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೇಮಕ ಮಾಡಿದೆ.</p>.<p>‘ಈ ಅವಕಾಶ ನೀಡಿದ್ದಕ್ಕಾಗಿ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಕೊಳಚೆ ಪ್ರದೇಶಗಳಲ್ಲಿ ಬೆಳೆಯುವ ಮಕ್ಕಳಿಗೆ ಹಲವು ಸೌಲಭ್ಯಗಳು ಸಿಗುತ್ತಿಲ್ಲ. ಶಿಕ್ಷಣದಿಂದಲೂ ವಂಚಿತರಾಗುತ್ತಿದ್ದಾರೆ. ಸಮಾಜದಲ್ಲಿ ಮಾನವೀಯ ಸಂಬಂಧಗಳು ಬಲಗೊಳ್ಳಬೇಕು. ಮಕ್ಕಳ ಬಾಲ್ಯವನ್ನು ರಕ್ಷಿಸುವ ಕೆಲಸವಾಗಬೇಕು’ ಎಂದು ಕಿಶನ್ ಅಭಿಪ್ರಾಯಪಟ್ಟರು.</p>.<p>ಆಯೋಗದ ಅಧ್ಯಕ್ಷ ಡಾ. ಆಂಟೋನಿ ಸೆಬಾಸ್ಟಿಯನ್, ‘ಆಯೋಗದ ರಾಯಭಾರಿಯಾಗಿ ಕಾರ್ಯನಿರ್ವಹಿಸಲು ಮುಂದೆ ಬಂದಿರುವ ಕಿಶನ್ ಅವರ ಸಾಮಾಜಿಕ ಹೊಣೆಗಾರಿಕೆ ಮೆಚ್ಚುವಂಥದ್ದು’ ಎಂದರು.</p>.<p>ಸುಮಾರು 200 ದೇಶಗಳ ರಾಷ್ಟ್ರಗೀತೆಗಳನ್ನು ಹಾಡುವ ಮೂಲಕ ದೇಶದ ಗಮನ ಸೆಳೆದಿರುವ ಮಾಸ್ಟರ್ ಯಥಾರ್ಥ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.</p>.<p>ದಕ್ಷಿಣ ಭಾರತದ ಯುನಿಸೆಫ್ ಪ್ರತಿನಿಧಿ ಸೋನಿ ಕುಟ್ಟಿ ಜಾರ್ಜ್, ಆಯೋಗದ ಸದಸ್ಯರಾದ ಎಂ.ಎಲ್. ಪರಶುರಾಮ, ಡಿ. ಶಂಕ್ರಪ್ಪ, ಎಚ್.ಸಿ. ರಾಘವೇಂದ್ರ, ಅಶೋಕ ಯರಗಟ್ಟಿ, ಭಾರತಿ ಹಾಗೂ ಆಯೋಗದ ಕಾರ್ಯದರ್ಶಿ ಇಂದಿರಾ, ಸಹಾಯಕ ನಿರ್ದೇಶಕಿ ಕವಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>