<p><strong>ಬೆಂಗಳೂರು</strong>: ‘ಮಕ್ಕಳು ದೇವರ ಸಮಾನ, ಅವರ ಮನಸ್ಸಿನಲ್ಲಿ ಕೆಟ್ಟ ಚಿಂತನೆ ಇರುವುದಿಲ್ಲ. ಜಾತಿ, ಮತ, ಪಂಥದ ಭೇದವಿರುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.</p>.<p>ರಕ್ಷಾ ಫೌಂಡೇಷನ್ನ 13ನೇ ವಾರ್ಷಿಕೋತ್ಸವದಲ್ಲಿ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಉಚಿತವಾಗಿ ಎರಡು ಲಕ್ಷ ನೋಟ್ ಪುಸ್ತಕಗಳು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಅನಾಥ ಆಶ್ರಮದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಶಕಗಳಿಂದ ಸಿ.ಕೆ. ರಾಮಮೂರ್ತಿ ಅವರ ನೇತೃತ್ವದಲ್ಲಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಸಹಕಾರ ನೀಡಲಾಗುತ್ತಿದೆ. ಸಾಧನೆ ಇಲ್ಲದೇ ಹೋದರೆ ಸಾವಿಗೆ ಅರ್ಥವಿಲ್ಲ. ಹುಟ್ಟಿದ ಮೇಲೆ ಸಾಧನೆ ಮಾಡಿ ನಿಲ್ಲಬೇಕು’ ಎಂದು ಹೇಳಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿ, ‘ಗುರುಗಳು ಪಾಠ ಮಾಡುತ್ತಾರೆ, ತಂದೆ, ತಾಯಿ ಹೇಳಿಕೊಡುತ್ತಾರೆ. ಆದರೆ ಪರೀಕ್ಷೆಯನ್ನು ನಾವೇ ಬರೆಯಬೇಕು. ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದರೆ ಜೀವನದಲ್ಲಿ ಸಾಧನೆ ಮಾಡಬಹುದು’ ಎಂದರು.</p>.<p>‘ವಿದ್ಯಾವಂತರಾದರೆ ಸಮಾಜದಲ್ಲಿ ಗೌರವ, ಮಾನ್ಯತೆ ಸಿಗುತ್ತದೆ, ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ವಿದ್ಯಾವಂತರಾಗಬೇಕು. ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ಎಂದು ರಕ್ಷಾ ಫೌಂಡೇಷನ್ ಉಚಿತ ನೋಟ್ ಪುಸ್ತಕ ಮತ್ತು ಉನ್ನತ ವ್ಯಾಸಂಗದ ನೆರವು ನೀಡಲಾಗುತ್ತಿದೆ’ ಎಂದು ಶಾಸಕ ಸಿ.ಕೆ. ರಾಮಮೂರ್ತಿ ತಿಳಿಸಿದರು.</p>.<p>ಜಯದೇವ ಆಸ್ಪತ್ರೆಗೆ ₹2 ಲಕ್ಷ ದೇಣಿಗೆಯನ್ನು ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ಅವರಿಗೆ ಬಿಬಿಎಂಪಿ ಮಾಜಿ ಸದಸ್ಯೆ ನಾಗರತ್ನ ರಾಮಮೂರ್ತಿ ನೀಡಿದರು.</p>.<p>ಶಾಸಕ ಉದಯ್ ಗರುಡಾಚಾರ್, ನಟರಾದ ಪ್ರಥಮ್, ವಸಿಷ್ಠ ಸಿಂಹ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಕ್ಕಳು ದೇವರ ಸಮಾನ, ಅವರ ಮನಸ್ಸಿನಲ್ಲಿ ಕೆಟ್ಟ ಚಿಂತನೆ ಇರುವುದಿಲ್ಲ. ಜಾತಿ, ಮತ, ಪಂಥದ ಭೇದವಿರುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.</p>.<p>ರಕ್ಷಾ ಫೌಂಡೇಷನ್ನ 13ನೇ ವಾರ್ಷಿಕೋತ್ಸವದಲ್ಲಿ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿಯರಿಗೆ ಉಚಿತವಾಗಿ ಎರಡು ಲಕ್ಷ ನೋಟ್ ಪುಸ್ತಕಗಳು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಅನಾಥ ಆಶ್ರಮದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಶಕಗಳಿಂದ ಸಿ.ಕೆ. ರಾಮಮೂರ್ತಿ ಅವರ ನೇತೃತ್ವದಲ್ಲಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಸಹಕಾರ ನೀಡಲಾಗುತ್ತಿದೆ. ಸಾಧನೆ ಇಲ್ಲದೇ ಹೋದರೆ ಸಾವಿಗೆ ಅರ್ಥವಿಲ್ಲ. ಹುಟ್ಟಿದ ಮೇಲೆ ಸಾಧನೆ ಮಾಡಿ ನಿಲ್ಲಬೇಕು’ ಎಂದು ಹೇಳಿದರು.</p>.<p>ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿ, ‘ಗುರುಗಳು ಪಾಠ ಮಾಡುತ್ತಾರೆ, ತಂದೆ, ತಾಯಿ ಹೇಳಿಕೊಡುತ್ತಾರೆ. ಆದರೆ ಪರೀಕ್ಷೆಯನ್ನು ನಾವೇ ಬರೆಯಬೇಕು. ಆತ್ಮಸ್ಥೈರ್ಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದರೆ ಜೀವನದಲ್ಲಿ ಸಾಧನೆ ಮಾಡಬಹುದು’ ಎಂದರು.</p>.<p>‘ವಿದ್ಯಾವಂತರಾದರೆ ಸಮಾಜದಲ್ಲಿ ಗೌರವ, ಮಾನ್ಯತೆ ಸಿಗುತ್ತದೆ, ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ವಿದ್ಯಾವಂತರಾಗಬೇಕು. ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ಎಂದು ರಕ್ಷಾ ಫೌಂಡೇಷನ್ ಉಚಿತ ನೋಟ್ ಪುಸ್ತಕ ಮತ್ತು ಉನ್ನತ ವ್ಯಾಸಂಗದ ನೆರವು ನೀಡಲಾಗುತ್ತಿದೆ’ ಎಂದು ಶಾಸಕ ಸಿ.ಕೆ. ರಾಮಮೂರ್ತಿ ತಿಳಿಸಿದರು.</p>.<p>ಜಯದೇವ ಆಸ್ಪತ್ರೆಗೆ ₹2 ಲಕ್ಷ ದೇಣಿಗೆಯನ್ನು ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ಅವರಿಗೆ ಬಿಬಿಎಂಪಿ ಮಾಜಿ ಸದಸ್ಯೆ ನಾಗರತ್ನ ರಾಮಮೂರ್ತಿ ನೀಡಿದರು.</p>.<p>ಶಾಸಕ ಉದಯ್ ಗರುಡಾಚಾರ್, ನಟರಾದ ಪ್ರಥಮ್, ವಸಿಷ್ಠ ಸಿಂಹ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>