<p><strong>ಬೆಂಗಳೂರು</strong>: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ 'ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ' (ಕೆಎಸ್ಸಿಎ) ಕಾರ್ಯದರ್ಶಿ ಎ.ಶಂಕರ್ ಹಾಗೂ ಖಜಾಂಚಿ ಇ.ಎಸ್. ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.</p><p>ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಈ ಇಬ್ಬರು, 'ಕಳೆದೆರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಹಾಗೂ ದುರದೃಷ್ಟಕರ ಘಟನೆಯಲ್ಲಿ ತಮ್ಮ ಪಾತ್ರ ಸೀಮಿತವಾಗಿದ್ದರೂ, ನೈತಿಕ ಹೊಣೆ ಹೊತ್ತು ನಾವು ಕೆಎಸ್ಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ಈ ಕುರಿತು ಸಂಸ್ಥೆಯ ಅಧ್ಯಕ್ಷರಿಗೆ ಶನಿವಾರ (2025ರ ಜೂನ್ 6ರಂದು) ರಾತ್ರಿ ಪತ್ರ ಬರೆದಿದ್ದೇವೆ ಎಂದು ತಿಳಿಸಲು ಬಯಸುತ್ತೇವೆ' ಎಂದು ಉಲ್ಲೇಖಿಸಿದ್ದಾರೆ.</p><p>2008ರಲ್ಲಿ ಐಪಿಎಲ್ ಆರಂಭವಾದಾಗಿನಿಂದಲೂ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಈ ಬಾರಿ ಚೊಚ್ಚಲ ಪ್ರಶಸ್ತಿ ಜಯಿಸಿದೆ. ಗುಜರಾತ್ನ ಅಹಮದಾಬಾದ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜೂನ್ 3ರಂದು ನಡೆದ ಫೈನಲ್ನಲ್ಲಿ 6 ರನ್ ಅಂತರದ ಜಯ ಸಾಧಿಸಿತ್ತು. ಹೀಗಾಗಿ, ದೇಶದಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.</p>.ಕಾಲ್ತುಳಿತ ದುರಂತ: RCB, KSCA ವಿರುದ್ಧ FIR, ವಿರಾಟ್ ಕೊಹ್ಲಿ ವಿರುದ್ಧವೂ ದೂರು.ಸಂಪಾದಕೀಯ | RCB ತಂಡಕ್ಕೆ ಸನ್ಮಾನ: ಕಾಲ್ತುಳಿತದ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು.<p>ಮರುದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಲು ಉದ್ದೇಶಿಸಿದ್ದ ಆರ್ಸಿಬಿ, ಮಧ್ಯಾಹ್ನ 3ಕ್ಕೆ ತಂಡದ ವಿಜಯೋತ್ಸವ ಮೆರವಣಿಗೆ ನಡೆಯಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿತ್ತು.</p><p>ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಟಗಾರರಿಗೆ ಸನ್ಮಾನ ನಡೆಯುವುದು, ಪರೇಡ್ ನಡೆಯುವುದು ಹಾಗೂ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲಗಳು ಮೂಡಿದ್ದವು.</p><p>ಅಭಿಮಾನಿಗಳು ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಕಾಲ್ತುಳಿತ ಉಂಟಾಗಿತ್ತು. ಈ ವೇಳೆ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p><p>ಈ ದುರಂತಕ್ಕೆ ಸರ್ಕಾರ, ಕೆಎಸ್ಸಿಎ, ಆರ್ಸಿಬಿ ಫ್ರಾಂಚೈಸ್ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ 'ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ' (ಕೆಎಸ್ಸಿಎ) ಕಾರ್ಯದರ್ಶಿ ಎ.ಶಂಕರ್ ಹಾಗೂ ಖಜಾಂಚಿ ಇ.ಎಸ್. ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.</p><p>ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಈ ಇಬ್ಬರು, 'ಕಳೆದೆರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಹಾಗೂ ದುರದೃಷ್ಟಕರ ಘಟನೆಯಲ್ಲಿ ತಮ್ಮ ಪಾತ್ರ ಸೀಮಿತವಾಗಿದ್ದರೂ, ನೈತಿಕ ಹೊಣೆ ಹೊತ್ತು ನಾವು ಕೆಎಸ್ಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ಈ ಕುರಿತು ಸಂಸ್ಥೆಯ ಅಧ್ಯಕ್ಷರಿಗೆ ಶನಿವಾರ (2025ರ ಜೂನ್ 6ರಂದು) ರಾತ್ರಿ ಪತ್ರ ಬರೆದಿದ್ದೇವೆ ಎಂದು ತಿಳಿಸಲು ಬಯಸುತ್ತೇವೆ' ಎಂದು ಉಲ್ಲೇಖಿಸಿದ್ದಾರೆ.</p><p>2008ರಲ್ಲಿ ಐಪಿಎಲ್ ಆರಂಭವಾದಾಗಿನಿಂದಲೂ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಈ ಬಾರಿ ಚೊಚ್ಚಲ ಪ್ರಶಸ್ತಿ ಜಯಿಸಿದೆ. ಗುಜರಾತ್ನ ಅಹಮದಾಬಾದ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜೂನ್ 3ರಂದು ನಡೆದ ಫೈನಲ್ನಲ್ಲಿ 6 ರನ್ ಅಂತರದ ಜಯ ಸಾಧಿಸಿತ್ತು. ಹೀಗಾಗಿ, ದೇಶದಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.</p>.ಕಾಲ್ತುಳಿತ ದುರಂತ: RCB, KSCA ವಿರುದ್ಧ FIR, ವಿರಾಟ್ ಕೊಹ್ಲಿ ವಿರುದ್ಧವೂ ದೂರು.ಸಂಪಾದಕೀಯ | RCB ತಂಡಕ್ಕೆ ಸನ್ಮಾನ: ಕಾಲ್ತುಳಿತದ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು.<p>ಮರುದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಲು ಉದ್ದೇಶಿಸಿದ್ದ ಆರ್ಸಿಬಿ, ಮಧ್ಯಾಹ್ನ 3ಕ್ಕೆ ತಂಡದ ವಿಜಯೋತ್ಸವ ಮೆರವಣಿಗೆ ನಡೆಯಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿತ್ತು.</p><p>ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಟಗಾರರಿಗೆ ಸನ್ಮಾನ ನಡೆಯುವುದು, ಪರೇಡ್ ನಡೆಯುವುದು ಹಾಗೂ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲಗಳು ಮೂಡಿದ್ದವು.</p><p>ಅಭಿಮಾನಿಗಳು ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಕಾಲ್ತುಳಿತ ಉಂಟಾಗಿತ್ತು. ಈ ವೇಳೆ 11 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p><p>ಈ ದುರಂತಕ್ಕೆ ಸರ್ಕಾರ, ಕೆಎಸ್ಸಿಎ, ಆರ್ಸಿಬಿ ಫ್ರಾಂಚೈಸ್ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>