<p><strong>ಬೆಂಗಳೂರು</strong>: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯವು ‘ಚಿಪ್ ಟು ಕ್ರಾಪ್’ ಶೀರ್ಷಿಕೆಯಡಿ ನಗರದಲ್ಲಿ 24 ಗಂಟೆಗಳ ಹ್ಯಾಕಥಾನ್ ನಡೆಸಿತು.</p>.<p>ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಮತ್ತು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್ಆರ್) ಸಹಯೋಗದಲ್ಲಿ ಈ ಹ್ಯಾಕಥಾನ್ ಹಮ್ಮಿಕೊಳ್ಳಲಾಗಿತ್ತು. ಐಸಿಎಆರ್–ಐಐಎಚ್ಆರ್ ಬೆಂಗಳೂರಿನ ನಿರ್ದೇಶಕ ತುಷಾರ್ ಕಾಂತಿ ಬೆಹೇರಾ ಹಾಗೂ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ನಿಸ್ಸಾರ್ ಅಹ್ಮದ್ ಅವರು ಈ ಹ್ಯಾಕಥಾನ್ನ ಅಂತಿಮ ಸುತ್ತನ್ನು ಉದ್ಘಾಟಿಸಿದರು.</p>.<p>ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೈಜ ಸಮಯದಲ್ಲಿ ಪರಿಹಾರೋಪಾಯ ಒದಗಿಸಬೇಕಾದ ಈ ಹ್ಯಾಕಥಾನ್ನಲ್ಲಿ, ನೂರಕ್ಕೂ ಅಧಿಕ ಮಂದಿ ಹೆಸರು ನೋಂದಾಯಿಸಿಕೊಂಡಿದ್ದರು. 30 ತಂಡಗಳಾಗಿ ಅಭ್ಯರ್ಥಿಗಳನ್ನು ವಿಂಗಡಿಸಲಾಗಿತ್ತು.</p>.<p>ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ತಂಡಗಳು, ಕೃಷಿ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಂತ್ರಜ್ಞಾನ ಆಧಾರಿತ ಪರಿಹಾರೋಪಾಯಗಳನ್ನು ಸೂಚಿಸಿದರು. ಇದನ್ನು ಐಐಎಚ್ಆರ್ ವಿಜ್ಞಾನಿಗಳು ಮೌಲ್ಯಮಾಪನ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯವು ‘ಚಿಪ್ ಟು ಕ್ರಾಪ್’ ಶೀರ್ಷಿಕೆಯಡಿ ನಗರದಲ್ಲಿ 24 ಗಂಟೆಗಳ ಹ್ಯಾಕಥಾನ್ ನಡೆಸಿತು.</p>.<p>ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಮತ್ತು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್ಆರ್) ಸಹಯೋಗದಲ್ಲಿ ಈ ಹ್ಯಾಕಥಾನ್ ಹಮ್ಮಿಕೊಳ್ಳಲಾಗಿತ್ತು. ಐಸಿಎಆರ್–ಐಐಎಚ್ಆರ್ ಬೆಂಗಳೂರಿನ ನಿರ್ದೇಶಕ ತುಷಾರ್ ಕಾಂತಿ ಬೆಹೇರಾ ಹಾಗೂ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ನಿಸ್ಸಾರ್ ಅಹ್ಮದ್ ಅವರು ಈ ಹ್ಯಾಕಥಾನ್ನ ಅಂತಿಮ ಸುತ್ತನ್ನು ಉದ್ಘಾಟಿಸಿದರು.</p>.<p>ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೈಜ ಸಮಯದಲ್ಲಿ ಪರಿಹಾರೋಪಾಯ ಒದಗಿಸಬೇಕಾದ ಈ ಹ್ಯಾಕಥಾನ್ನಲ್ಲಿ, ನೂರಕ್ಕೂ ಅಧಿಕ ಮಂದಿ ಹೆಸರು ನೋಂದಾಯಿಸಿಕೊಂಡಿದ್ದರು. 30 ತಂಡಗಳಾಗಿ ಅಭ್ಯರ್ಥಿಗಳನ್ನು ವಿಂಗಡಿಸಲಾಗಿತ್ತು.</p>.<p>ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ತಂಡಗಳು, ಕೃಷಿ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಂತ್ರಜ್ಞಾನ ಆಧಾರಿತ ಪರಿಹಾರೋಪಾಯಗಳನ್ನು ಸೂಚಿಸಿದರು. ಇದನ್ನು ಐಐಎಚ್ಆರ್ ವಿಜ್ಞಾನಿಗಳು ಮೌಲ್ಯಮಾಪನ ಮಾಡಿದರು ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>