‘ಚೀಟಿ ವ್ಯವಹಾರದಲ್ಲಿ ಹಣ ಕಟ್ಟಿದರೆ, ಅದನ್ನು ಷೇರು ಮಾರುಕಟ್ಟೆ ಹಾಗೂ ವಿವಿಧ ಉದ್ಯಮಗಳಲ್ಲಿ ಹೂಡಿಕೆ ಮಾಡಲಾಗುವುದು. ಅದರಿಂದ ಹೆಚ್ಚಿನ ಲಾಭ ಪಡೆದು, ಗ್ರಾಹಕರಿಗೆ ನೀಡುವುದಾಗಿ ಆರೋಪಿಗಳು ಹೇಳಿದ್ದರು. ಅದನ್ನು ನಂಬಿದ್ದ ಗಿರಿನಗರ, ಹೊಸಕೆರೆಹಳ್ಳಿ, ಹನುಮಂತನಗರ ಹಾಗೂ ಸುತ್ತಮುತ್ತಲ 900ಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದರು’ ಎಂದೂ ಪ್ರತಿಭಟನಕಾರರು ಹೇಳಿದರು.