<p><strong>ಬೆಂಗಳೂರು</strong>: ಕರ್ನಾಟಕ ಚಿತ್ರಕಲಾ ಪರಿಷತ್ನ 21ನೇ ವರ್ಷದ ಚಿತ್ರಸಂತೆ ಇದೇ 7ರಂದು ಕುಮಾರಕೃಪಾ ರಸ್ತೆ ಮತ್ತು ಪರಿಷತ್ ಆವರಣದಲ್ಲಿ ನಡೆಯಲಿದೆ.</p>.<p>ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್, ‘ಈ ಬಾರಿ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಚಿತ್ರಸಂತೆಯನ್ನು ಆಯೋಜಿಸಲಾಗುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಭಾರತೀಯ ವಿಜ್ಞಾನಿಗಳಿಗೆ ಚಿತ್ರಸಂತೆಯನ್ನು ಸಮರ್ಪಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಜ.7ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರಸಂತೆ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡುವರು’ ಎಂದು ಅವರು ವಿವರಿಸಿದರು.</p>.<p>‘ಚಿತ್ರಸಂತೆಯಲ್ಲಿ 22 ರಾಜ್ಯಗಳಿಂದ 1500 ಮಂದಿ ಕಲಾವಿದರ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಒಟ್ಟು 2726 ಕಲಾವಿದರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಪ್ರತಿ ವರ್ಷ 1200 ಕಲಾವಿದರಿಗೆ ಅವಕಾಶ ಕಲ್ಪಿಸಲಾಗುತ್ತಿತ್ತು. ಈ ಬಾರಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾದ ಕಾರಣ, ಶಿವಾನಂದ ವೃತ್ತದ ಮೇಲ್ಸೇತುವೆ ಕೆಳ ಭಾಗದಲ್ಲಿ ಹೆಚ್ಚುವರಿಯಾಗಿ 300 ಮಳಿಗೆಗಳನ್ನು ತೆರೆಯಲಾಗುತ್ತಿದೆ‘ ಎಂದು ಮಾಹಿತಿ ನೀಡಿದರು.</p>.<p><strong>ಫೀಡರ್ ಬಸ್ ಸೇವೆ : </strong>ಚಿತ್ರಸಂತೆಗೆ ಬರುವವರಿಗೆ ಮೆಜೆಸ್ಟಿಕ್ ಮತ್ತು ಮಂತ್ರಿ ಮಾಲ್ ಮೆಟ್ರೊ ನಿಲ್ದಾಣಗಳಿಂದ ಶಿವಾನಂದ ವೃತ್ತದ ಮಾರ್ಗವಾಗಿ ವಿಧಾನಸೌಧದವರೆಗೆ ಜ.7 ರಂದು ಬೆಳಿಗ್ಗೆ 8ರಿಂದ ರಾತ್ರಿ 9 ರವರೆಗೆ ಫೀಡರ್ ಬಸ್ ಸೇವೆ ಕಲ್ಪಿಸುವಂತೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.</p>.<p><strong>6ರಂದು ‘ಚಿತ್ರಕಲಾ ಸಮ್ಮಾನ್’</strong>: ’ಜ.6ರಂದು ಬೆಳಿಗ್ಗೆ 11.30ಕ್ಕೆ ಚಿತ್ರಕಲಾ ಪರಿಷತ್ತಿನಿಂದ ನಾಲ್ವರು ಕಲಾವಿದರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ 'ಚಿತ್ರಕಲಾ ಸಮ್ಮಾನ್' ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ‘ ಎಂದು ಶಂಕರ್ ತಿಳಿಸಿದರು.</p>.<p><strong>ಸಂತೆಯಲ್ಲಿ ಸೌಲಭ್ಯಗ</strong>ಳು * ಕ್ರೆಸೆಂಟ್ ರೋಡ್ನಲ್ಲಿ ಗಾಲ್ಫ್ ಕ್ಲಬ್ವರೆಗೆ ರೇಸ್ಕೋರ್ಸ್ ರಸ್ತೆ ಹಾಗೂ ಬಿಡಿಎ ಆವರಣ ರೈಲ್ವೆ ಪ್ಯಾರಲಲ್ ರಸ್ತೆಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ. * ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲಾಕೃತಿಗಳಿಗಾಗಿ ಶಿವಾನಂದ ವೃತ್ತದಿಂದ ಗುರುರಾಜ ಕಲ್ಯಾಣ ಮಂಟಪದವರೆಗಿನ ಸ್ಟೀಲ್ ಬ್ರಿಡ್ಜ್ ತಳಭಾಗದಲ್ಲಿ ಮಾರಾಟದ ಮಳಿಗೆಗೆ ವ್ಯವಸ್ಥೆ. * 20 ಆಯ್ದ ಸ್ಥಳಗಳಲ್ಲಿ ಮೊಬೈಲ್ ಶೌಚಾಲಯ ಅಗತ್ಯ ಸಿಸಿ ಕ್ಯಾಮೆರಾಗಳ ಅಳವಡಿಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಚಿತ್ರಕಲಾ ಪರಿಷತ್ನ 21ನೇ ವರ್ಷದ ಚಿತ್ರಸಂತೆ ಇದೇ 7ರಂದು ಕುಮಾರಕೃಪಾ ರಸ್ತೆ ಮತ್ತು ಪರಿಷತ್ ಆವರಣದಲ್ಲಿ ನಡೆಯಲಿದೆ.</p>.<p>ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್, ‘ಈ ಬಾರಿ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಚಿತ್ರಸಂತೆಯನ್ನು ಆಯೋಜಿಸಲಾಗುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಭಾರತೀಯ ವಿಜ್ಞಾನಿಗಳಿಗೆ ಚಿತ್ರಸಂತೆಯನ್ನು ಸಮರ್ಪಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಜ.7ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರಸಂತೆ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡುವರು’ ಎಂದು ಅವರು ವಿವರಿಸಿದರು.</p>.<p>‘ಚಿತ್ರಸಂತೆಯಲ್ಲಿ 22 ರಾಜ್ಯಗಳಿಂದ 1500 ಮಂದಿ ಕಲಾವಿದರ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಒಟ್ಟು 2726 ಕಲಾವಿದರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಪ್ರತಿ ವರ್ಷ 1200 ಕಲಾವಿದರಿಗೆ ಅವಕಾಶ ಕಲ್ಪಿಸಲಾಗುತ್ತಿತ್ತು. ಈ ಬಾರಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾದ ಕಾರಣ, ಶಿವಾನಂದ ವೃತ್ತದ ಮೇಲ್ಸೇತುವೆ ಕೆಳ ಭಾಗದಲ್ಲಿ ಹೆಚ್ಚುವರಿಯಾಗಿ 300 ಮಳಿಗೆಗಳನ್ನು ತೆರೆಯಲಾಗುತ್ತಿದೆ‘ ಎಂದು ಮಾಹಿತಿ ನೀಡಿದರು.</p>.<p><strong>ಫೀಡರ್ ಬಸ್ ಸೇವೆ : </strong>ಚಿತ್ರಸಂತೆಗೆ ಬರುವವರಿಗೆ ಮೆಜೆಸ್ಟಿಕ್ ಮತ್ತು ಮಂತ್ರಿ ಮಾಲ್ ಮೆಟ್ರೊ ನಿಲ್ದಾಣಗಳಿಂದ ಶಿವಾನಂದ ವೃತ್ತದ ಮಾರ್ಗವಾಗಿ ವಿಧಾನಸೌಧದವರೆಗೆ ಜ.7 ರಂದು ಬೆಳಿಗ್ಗೆ 8ರಿಂದ ರಾತ್ರಿ 9 ರವರೆಗೆ ಫೀಡರ್ ಬಸ್ ಸೇವೆ ಕಲ್ಪಿಸುವಂತೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.</p>.<p><strong>6ರಂದು ‘ಚಿತ್ರಕಲಾ ಸಮ್ಮಾನ್’</strong>: ’ಜ.6ರಂದು ಬೆಳಿಗ್ಗೆ 11.30ಕ್ಕೆ ಚಿತ್ರಕಲಾ ಪರಿಷತ್ತಿನಿಂದ ನಾಲ್ವರು ಕಲಾವಿದರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ 'ಚಿತ್ರಕಲಾ ಸಮ್ಮಾನ್' ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ‘ ಎಂದು ಶಂಕರ್ ತಿಳಿಸಿದರು.</p>.<p><strong>ಸಂತೆಯಲ್ಲಿ ಸೌಲಭ್ಯಗ</strong>ಳು * ಕ್ರೆಸೆಂಟ್ ರೋಡ್ನಲ್ಲಿ ಗಾಲ್ಫ್ ಕ್ಲಬ್ವರೆಗೆ ರೇಸ್ಕೋರ್ಸ್ ರಸ್ತೆ ಹಾಗೂ ಬಿಡಿಎ ಆವರಣ ರೈಲ್ವೆ ಪ್ಯಾರಲಲ್ ರಸ್ತೆಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆ. * ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲಾಕೃತಿಗಳಿಗಾಗಿ ಶಿವಾನಂದ ವೃತ್ತದಿಂದ ಗುರುರಾಜ ಕಲ್ಯಾಣ ಮಂಟಪದವರೆಗಿನ ಸ್ಟೀಲ್ ಬ್ರಿಡ್ಜ್ ತಳಭಾಗದಲ್ಲಿ ಮಾರಾಟದ ಮಳಿಗೆಗೆ ವ್ಯವಸ್ಥೆ. * 20 ಆಯ್ದ ಸ್ಥಳಗಳಲ್ಲಿ ಮೊಬೈಲ್ ಶೌಚಾಲಯ ಅಗತ್ಯ ಸಿಸಿ ಕ್ಯಾಮೆರಾಗಳ ಅಳವಡಿಕೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>