ಈ ಕುರಿತು ಪ್ರತಿಕ್ರಿಯಿಸಿರುವ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಬಿ.ಕೆ ವಿಜಯೇಂದ್ರ, ’ನಾಗರಿಕರಿಗೆ ನಾವು ಈಗಾಗಲೇ ಕಾಯಿಲೆ ಬಗ್ಗೆ ಮಾಹಿತಿ ನೀಡಿದ್ದೇವೆ. ಅಲ್ಲದೆ, ಸ್ಥಳೀಯ ಬಿಬಿಎಂಪಿ ಕಚೇರಿಯಲ್ಲಿ ಸಹಾಯ ಕೇಂದ್ರಗಳನ್ನು ತೆರದಿದ್ದೇವೆ. ಕಾಯಿಲೆ ಹಿನ್ನೆಲೆಯಲ್ಲಿ ನಾವು ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಸಿಬ್ಬಂದಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಕಾಡುಗೊಂಡನಹಳ್ಳಿ ಭಾಗದಿಂದ ಗ್ಯಾಸ್ಟ್ರೋಎಂಟರಾಲಜಿ ವರದಿಗಳನ್ನು ತರಿಸಿಕೊಂಡಿದ್ದೇವೆ. ಕಾಯಿಲೆ ಬಗ್ಗೆ ಬಿಬಿಎಂಪಿಗೆ ಸ್ಪಷ್ಟ ಅರಿವಿದೆ. ನಮ್ಮ ವೈದ್ಯಾಧಿಕಾರಿಗಳು ಈಗಾಗಲೇ ಸ್ಥಳಕ್ಕೆ ತೆರಳಿ ಅಧ್ಯಯನದಲ್ಲಿ ತೊಡಗಿದ್ದಾರೆ,’ ಎಂದು ಅವರು ತಿಳಿಸಿದ್ದಾರೆ.
ಇನ್ನು ಆಗ್ನೇಯ ಪ್ರದೇಶಗಳಿಗೆ ಹೊಂದಿಕೊಂಡಿರುವ ಕೋರಮಂಗಲ ಮತ್ತು ಎಚ್ಎಸ್ಆರ್ ಲೇಔಟ್ ಪ್ರದೇಶಗಳಲ್ಲಿ ಕಾಲರಾ ರೋಗ ಪತ್ತೆಯಾಗಿಲ್ಲ ಎಂದು ಸೆಂಟ್ ಜಾನ್ಸ್ ಆಸ್ಪತ್ರೆಯ ಮುಖ್ಯಸ್ಥರು ಹೇಳಿದ್ದಾರೆ.