<p><strong>ಬೆಂಗಳೂರು</strong>: ಕ್ರೈಸ್ಟ್ ವಿಶ್ವವಿದ್ಯಾಲಯದ (ಡೀಮ್ಡ್ ಟು ಬಿ) ಯಶವಂತಪುರ ಕ್ಯಾಂಪಸ್ನಲ್ಲಿ ಬಿಹೆವಿಯರಲ್ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಆರಂಭಿಸಲಾಗುವುದು ಎಂದು ಕ್ರೈಸ್ಟ್ ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ನಿಕಾಯದ ಡೀನ್ ಕೆ.ಜಯಶಂಕರ ರೆಡ್ಡಿ ಘೋಷಿಸಿದರು.</p>.<p>ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ಆರಂಭವಾದ ಮೂರು ದಿನಗಳ ಅಂತರರಾಷ್ಟ್ರೀಯ ಮಟ್ಟದ ಬಿಹೆವಿಯರಲ್ ಅರ್ಥಶಾಸ್ತ್ರ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಹಾಗೂ ಸಂಶೋಧಕರು ತಮ್ಮ ದೃಷ್ಟಿಕೋನವನ್ನು ವಿಸ್ತರಿಸಿಕೊಂಡು, ಶೈಕ್ಷಣಿಕ ಹಾಗೂ ವೃತ್ತಿಜೀವನದಲ್ಲಿ ಅರ್ಥಪೂರ್ಣ ಮತ್ತು ಸಮಾಜಮುಖಿ ದಾರಿಯನ್ನು ಆರಿಸಿಕೊಳ್ಳಬೇಕು’ ಎಂದು ಬಿಐಎಎಸ್ ಸಂಸ್ಥಾಪಕ ಶುಭಭ್ರತ ರಾಯ್ ಸಲಹೆ ನೀಡಿದರು. </p>.<p>ಈ ಸಮ್ಮೇಳನದಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು, ಸಂಶೋಧಕರು ಹಾಗೂ ತಜ್ಞರು ಬಿಹೆವಿಯರಲ್ ಅರ್ಥಶಾಸ್ತ್ರದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಐದು ದೇಶಗಳಿಂದ 150ಕ್ಕೂ ಹೆಚ್ಚು ಸಂಶೋಧಕರು ಭಾಗಿಯಾಗಿದ್ದು, 70ಕ್ಕೂ ಹೆಚ್ಚುಸಂಶೋಧನಾ ಪ್ರಬಂಧಗಳು ಮಂಡನೆಯಾಗಲಿವೆ.</p>.<p>ವಿಶ್ವಬ್ಯಾಂಕ್, ಹಾರ್ವರ್ಡ್ ವಿಶ್ವವಿದ್ಯಾಲಯ, ಕ್ವೀನ್ಸ್ಲ್ಯಾಂಡ್ ವಿಶ್ವವಿದ್ಯಾಲಯ, ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತು ಬಿಐಎಎಸ್ ಮುಂತಾದ ಸಂಸ್ಥೆಗಳ ಉಪನ್ಯಾಸಕರು ಭಾಗಿಯಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕ್ರೈಸ್ಟ್ ವಿಶ್ವವಿದ್ಯಾಲಯದ (ಡೀಮ್ಡ್ ಟು ಬಿ) ಯಶವಂತಪುರ ಕ್ಯಾಂಪಸ್ನಲ್ಲಿ ಬಿಹೆವಿಯರಲ್ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಆರಂಭಿಸಲಾಗುವುದು ಎಂದು ಕ್ರೈಸ್ಟ್ ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ನಿಕಾಯದ ಡೀನ್ ಕೆ.ಜಯಶಂಕರ ರೆಡ್ಡಿ ಘೋಷಿಸಿದರು.</p>.<p>ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ಆರಂಭವಾದ ಮೂರು ದಿನಗಳ ಅಂತರರಾಷ್ಟ್ರೀಯ ಮಟ್ಟದ ಬಿಹೆವಿಯರಲ್ ಅರ್ಥಶಾಸ್ತ್ರ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಹಾಗೂ ಸಂಶೋಧಕರು ತಮ್ಮ ದೃಷ್ಟಿಕೋನವನ್ನು ವಿಸ್ತರಿಸಿಕೊಂಡು, ಶೈಕ್ಷಣಿಕ ಹಾಗೂ ವೃತ್ತಿಜೀವನದಲ್ಲಿ ಅರ್ಥಪೂರ್ಣ ಮತ್ತು ಸಮಾಜಮುಖಿ ದಾರಿಯನ್ನು ಆರಿಸಿಕೊಳ್ಳಬೇಕು’ ಎಂದು ಬಿಐಎಎಸ್ ಸಂಸ್ಥಾಪಕ ಶುಭಭ್ರತ ರಾಯ್ ಸಲಹೆ ನೀಡಿದರು. </p>.<p>ಈ ಸಮ್ಮೇಳನದಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು, ಸಂಶೋಧಕರು ಹಾಗೂ ತಜ್ಞರು ಬಿಹೆವಿಯರಲ್ ಅರ್ಥಶಾಸ್ತ್ರದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಐದು ದೇಶಗಳಿಂದ 150ಕ್ಕೂ ಹೆಚ್ಚು ಸಂಶೋಧಕರು ಭಾಗಿಯಾಗಿದ್ದು, 70ಕ್ಕೂ ಹೆಚ್ಚುಸಂಶೋಧನಾ ಪ್ರಬಂಧಗಳು ಮಂಡನೆಯಾಗಲಿವೆ.</p>.<p>ವಿಶ್ವಬ್ಯಾಂಕ್, ಹಾರ್ವರ್ಡ್ ವಿಶ್ವವಿದ್ಯಾಲಯ, ಕ್ವೀನ್ಸ್ಲ್ಯಾಂಡ್ ವಿಶ್ವವಿದ್ಯಾಲಯ, ಅಜೀಮ್ ಪ್ರೇಮ್ಜಿ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ ಮತ್ತು ಬಿಐಎಎಸ್ ಮುಂತಾದ ಸಂಸ್ಥೆಗಳ ಉಪನ್ಯಾಸಕರು ಭಾಗಿಯಾಗಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>