ಸಂಕಷ್ಟದಲ್ಲಿರುವವರಿಗೆ ತಕ್ಷಣವೇ ನೆರವು ನೀಡಲಾಗಿದೆ. ಆಗಸ್ಟ್ 25 ಮತ್ತು 26ರಂದು ಕೊಡಗು ಜಿಲ್ಲೆಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಬಟ್ಟೆ, ಆಹಾರ ಸಾಮಗ್ರಿ, ಹೊದಿಕೆ, ನಿತ್ಯೋಪಯೋಗಿ ವಸ್ತು, ಹಣ್ಣು, ಔಷಧಿಗಳನ್ನು ವಿತರಿಸಲಾಗಿದೆ. ಆದಿಚುಂಚನಗಿರಿ ಆಸ್ಪತ್ರೆಯ ವೈದ್ಯರನ್ನು ಜೊತೆಯಲ್ಲಿ ಕರೆದೊಯ್ದು ಚಿಕಿತ್ಸೆಯನ್ನೂ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದರು.