<p><strong>ಬೆಂಗಳೂರು: </strong>ಚರ್ಚ್ಸ್ಟ್ರೀಟ್ನಲ್ಲಿ ಫೆಬ್ರುವರಿವರೆಗೆ ಎಲ್ಲ ವಾರಾಂತ್ಯಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶಿಸಿದ್ದಾರೆ.</p>.<p>'ವಾಯುಮಾಲಿನ್ಯ ತಡೆಯುವುದು ಮತ್ತು ಸೈಕಲ್ ಸವಾರರು, ಪಾದಚಾರಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ'.</p>.<p>'ಇಲ್ಲಿ ವಾಯು ಮಾಲಿನ್ಯ ಕಡಿಮೆಯಾಗಿ ಗಾಳಿಯ ಗುಣಮಟ್ಟ ಹೆಚ್ಚಿದರೆ, ಉಳಿದ ಕಡೆಗಳಲ್ಲೂ ಈ ನಿಯಮ ಜಾರಿಗೊಳಿಸಲಾಗುವುದು. ಬ್ಯಾರಿಕೇಡ್ ಅಳವಡಿಸಿ, ಚರ್ಚ್ಸ್ಟ್ರೀಟ್ ನಿವಾಸಿಗಳ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ನಿಯಮ 2020ರ ಫೆಬ್ರುವರಿ ಅಂತ್ಯದವರೆಗೆ ಮಾತ್ರ' ಎಂದು ತಿಳಿಸಿದ್ದಾರೆ.</p>.<p>'ಕ್ಲೀನ್ಏರ್ ಸ್ಟ್ರೀಟ್' ಯೋಜನೆ ಅನುಷ್ಠಾನಗೊಳಿಸಲು ಚರ್ಚ್ ಸ್ಟ್ರೀಟ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚು. ಪ್ರಾಯೋಗಿಕವಾಗಿ ಈ ರಸ್ತೆಯನ್ನು 'ಫ್ರೀ ಏರ್' ಅಥವಾ 'ಓಪನ್ ಏರ್' ಮಾದರಿಗೆ ಪರಿವರ್ತಿಸಲಾಗುತ್ತಿದೆ. ಅದಕ್ಕಾಗಿ ಇಲ್ಲಿ ವಾರಾಂತ್ಯದಲ್ಲಿ ಮಾತ್ರ ವಾಹನ ಸಂಚಾರ ನಿಷೇಧಿಸಲಾಗಿದೆ. ಜನರ ಸ್ಪಂದನೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಜಂಟಿ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚರ್ಚ್ಸ್ಟ್ರೀಟ್ನಲ್ಲಿ ಫೆಬ್ರುವರಿವರೆಗೆ ಎಲ್ಲ ವಾರಾಂತ್ಯಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶಿಸಿದ್ದಾರೆ.</p>.<p>'ವಾಯುಮಾಲಿನ್ಯ ತಡೆಯುವುದು ಮತ್ತು ಸೈಕಲ್ ಸವಾರರು, ಪಾದಚಾರಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ'.</p>.<p>'ಇಲ್ಲಿ ವಾಯು ಮಾಲಿನ್ಯ ಕಡಿಮೆಯಾಗಿ ಗಾಳಿಯ ಗುಣಮಟ್ಟ ಹೆಚ್ಚಿದರೆ, ಉಳಿದ ಕಡೆಗಳಲ್ಲೂ ಈ ನಿಯಮ ಜಾರಿಗೊಳಿಸಲಾಗುವುದು. ಬ್ಯಾರಿಕೇಡ್ ಅಳವಡಿಸಿ, ಚರ್ಚ್ಸ್ಟ್ರೀಟ್ ನಿವಾಸಿಗಳ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ನಿಯಮ 2020ರ ಫೆಬ್ರುವರಿ ಅಂತ್ಯದವರೆಗೆ ಮಾತ್ರ' ಎಂದು ತಿಳಿಸಿದ್ದಾರೆ.</p>.<p>'ಕ್ಲೀನ್ಏರ್ ಸ್ಟ್ರೀಟ್' ಯೋಜನೆ ಅನುಷ್ಠಾನಗೊಳಿಸಲು ಚರ್ಚ್ ಸ್ಟ್ರೀಟ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚು. ಪ್ರಾಯೋಗಿಕವಾಗಿ ಈ ರಸ್ತೆಯನ್ನು 'ಫ್ರೀ ಏರ್' ಅಥವಾ 'ಓಪನ್ ಏರ್' ಮಾದರಿಗೆ ಪರಿವರ್ತಿಸಲಾಗುತ್ತಿದೆ. ಅದಕ್ಕಾಗಿ ಇಲ್ಲಿ ವಾರಾಂತ್ಯದಲ್ಲಿ ಮಾತ್ರ ವಾಹನ ಸಂಚಾರ ನಿಷೇಧಿಸಲಾಗಿದೆ. ಜನರ ಸ್ಪಂದನೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಜಂಟಿ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>