ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್, 'ಪ್ರತಿ ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 10ರಿಂದ ಮಧ್ಯರಾತ್ರಿ 12ರವರೆಗೆ ಈ ಬೀದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಯೋಜನೆಯ ಅವಧಿಯಲ್ಲಿ ಚರ್ಚ್ಸ್ಟ್ರೀಟ್ನ ವಾಯುಮಾಲಿನ್ಯ ಎಷ್ಟು ನಿಯಂತ್ರಣಕ್ಕೆ ಬಂದಿದೆ ಎಂಬುದನ್ನು ಪರೀಕ್ಷಿಸಲಾಗುವುದು. ಇದು ಯಶಸ್ವಿಯಾದರೆ ನಗರದ ಬೇರೆ ಸ್ಥಳಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗುವುದು' ತಿಳಿಸಿದರು.