<p><strong>ಬೆಂಗಳೂರು:</strong> ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.</p>.<p>‘ವೆಂಕಟೇಶ್, ಸುಬ್ರಹ್ಮಣ್ಯ ಹಾಗೂ ಬಾಲರೆಡ್ಡಿ ಬಂಧಿತರು. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಸಿಐಡಿ ಪೊಲೀಸರು ಹೇಳಿದರು.</p>.<p>‘ಬ್ಯಾಂಕ್ನ ಅಧ್ಯಕ್ಷರ ಸಂಬಂಧಿಯೂ ಆಗಿದ್ದ ವೆಂಕಟೇಶ್, ಪ್ರಕರಣ ದಾಖಲಾದಾಗಿನಿಂದ ತಲೆಮರೆಸಿಕೊಂಡಿದ್ದ. ಸುಬ್ರಹ್ಮಣ್ಯ ಮತ್ತು ಬಾಲರೆಡ್ಡಿ ಸಹ ನಾಪತ್ತೆಯಾಗಿದ್ದರು. ರಾಯದುರ್ಗ ಹಾಗೂ ಹಾನಗಲ್ನ ವಸತಿಗೃಹದಲ್ಲಿ ಆರೋಪಿಗಳು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಪ್ರಕರಣ ಪ್ರಮುಖ ಆರೋಪಿಗಳಾದ ಕೆ. ರಾಮಕೃಷ್ಣ, ಕೆ.ಆರ್. ವೇಣುಗೋಪಾಲ್ ಹಾಗೂ ಜಿ. ರಘುನಾಥ್ ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆದಿದ್ದು, ಮಾಹಿತಿ ಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.</p>.<p>‘ವೆಂಕಟೇಶ್, ಸುಬ್ರಹ್ಮಣ್ಯ ಹಾಗೂ ಬಾಲರೆಡ್ಡಿ ಬಂಧಿತರು. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಸಿಐಡಿ ಪೊಲೀಸರು ಹೇಳಿದರು.</p>.<p>‘ಬ್ಯಾಂಕ್ನ ಅಧ್ಯಕ್ಷರ ಸಂಬಂಧಿಯೂ ಆಗಿದ್ದ ವೆಂಕಟೇಶ್, ಪ್ರಕರಣ ದಾಖಲಾದಾಗಿನಿಂದ ತಲೆಮರೆಸಿಕೊಂಡಿದ್ದ. ಸುಬ್ರಹ್ಮಣ್ಯ ಮತ್ತು ಬಾಲರೆಡ್ಡಿ ಸಹ ನಾಪತ್ತೆಯಾಗಿದ್ದರು. ರಾಯದುರ್ಗ ಹಾಗೂ ಹಾನಗಲ್ನ ವಸತಿಗೃಹದಲ್ಲಿ ಆರೋಪಿಗಳು ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಪ್ರಕರಣ ಪ್ರಮುಖ ಆರೋಪಿಗಳಾದ ಕೆ. ರಾಮಕೃಷ್ಣ, ಕೆ.ಆರ್. ವೇಣುಗೋಪಾಲ್ ಹಾಗೂ ಜಿ. ರಘುನಾಥ್ ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆದಿದ್ದು, ಮಾಹಿತಿ ಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>