ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಮೂಲಕ ವಂಚನೆ: ಸಿಐಡಿ ತನಿಖೆ

Last Updated 13 ಮಾರ್ಚ್ 2020, 22:25 IST
ಅಕ್ಷರ ಗಾತ್ರ

ಬೆಂಗಳೂರು: ಕೊಡಗಿನಲ್ಲಿ ‘ಕ್ಯಾಪಿಟಲ್‌ ರಿಲಯನ್ಸ್‌ ಡಾಟ್‌ ಇನ್‌’ ಎಂಬ ವೆಬ್‌ಸೈಟ್‌ ತೆರೆದು ಹಣ ದ್ವಿಗುಣಗೊಳಿಸುವುದಾಗಿ ಹೇಳಿ ಸಾರ್ವಜನಿಕರನ್ನು ವಂಚಿಸಿದ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್‌ ಈ ವಿಷಯ ಪ್ರಸ್ತಾಪಿಸಿದರು. ಕೊಡಗಿನಲ್ಲಿ ಈ ನಕಲಿ ಕಂಪನಿಯು ಸುಮಾರು 3,000 ಜನರನ್ನು ವಂಚಿಸಿದೆ. ಈ ಬಗ್ಗೆ ಸಿಬಿಐ ತನಿಖೆಯೇ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವರು ಸಿಐಡಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT