ಹಣಕಾಸು ಅವ್ಯವಹಾರ ಕುರಿತು ಸಾರ್ವಜನಿಕರಿಂದ ಬಂದಿದ್ದ ದೂರುಗಳನ್ನು ಆಧರಿಸಿ ಎಸಿಬಿ ಜೂನ್ 18ರಂದು ಬ್ಯಾಂಕಿನ ಪ್ರಧಾನ ಶಾಖೆ, ಬಸವನಗುಡಿ ಶಾಖೆ, ಶ್ರೀ ಗುರುಸಾರ್ವಭೌಮ ಸೌಹಾರ್ದ ಸಹಕಾರ ಸಂಘ, ಬ್ಯಾಂಕಿನ ಮಾಜಿ ಅಧ್ಯಕ್ಷ ರಾಮಕೃಷ್ಣ ಹಾಗೂ ಮಾಜಿ ಸಿಇಒ ವಾಸುದೇವ ಮಯ್ಯ ಮನೆಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿತ್ತು.