‘2021ರಲ್ಲಿ ಸ್ನೇಹಿತ ಮಂಜುನಾಥ್ ಮೂಲಕ ಸುನಿಲ್ ಅವರಿಗೆ ರಾಮಚಂದ್ರ ಭಟ್ ಪರಿಚಯವಾಗಿತ್ತು. ತನಗೆ ಬೆಂಗಳೂರಿನ ಸಿಐಡಿ ಘಟಕದ ಅಧಿಕಾರಿ ಅನಿತಾ ಅವರ ಪರಿಚಯವಿದ್ದು, ಅವರಿಗೆ ಕೆಪಿಎಸ್ಸಿ ಹಾಗೂ ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಹಲವು ಪ್ರಭಾವಿ ವ್ಯಕ್ತಿಗಳ ಸಂಪರ್ಕವಿದೆ. ಸರ್ಕಾರಿ ಕೆಲಸ ಕೊಡಿಸುತ್ತೇನೆ’ ಎಂದು ರಾಮಚಂದ್ರ ಭಟ್ ನಂಬಿಸಿದ್ದ. ಇದಕ್ಕೆ ಹಣ ನೀಡಬೇಕೆಂದು ಹೇಳಿದ್ದ. ಅದಾದ ಮೇಲೆ ಸುನಿಲ್, ಸಿಐಡಿ ಕಚೇರಿಯಲ್ಲಿ ಅನಿತಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ’ ಎಂದು ಮೂಲಗಳು ತಿಳಿಸಿವೆ.