<p>ಬೆಂಗಳೂರು: ತೆರೆದ ಬಾವಿಗಳ ಪುನರುಜ್ಜೀವನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪುರವಂಕರ ಕಂಪನಿಗೆ ‘ಸಿಐಡಿಸಿ ವಿಶ್ವಕರ್ಮ ಪ್ರಶಸ್ತಿ’ ದೊರೆತಿದೆ. </p>.<p>ನಿರ್ಮಾಣ ಉದ್ಯಮ ಅಭಿವೃದ್ಧಿ ಮಂಡಳಿಯು (ಸಿಐಡಿಸಿ) ನವದೆಹಲಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 15ನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯು ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.</p>.<p>ಬೆಂಗಳೂರಿನ ಬಯೋ ಎನ್ವಿರಾನ್ಮೆಂಟಲ್ ಟ್ರಸ್ಟ್ ಹಮ್ಮಿಕೊಂಡಿರುವ ‘ಬೆಂಗಳೂರಿಗಾಗಿ ದಶಲಕ್ಷ ಇಂಗು ಬಾವಿಗಳು’ ಅಭಿಯಾನದಡಿ ತೆರೆದ ಬಾವಿಗಳನ್ನು ಪುನಶ್ಚೇತನಗೊಳಿಸುವ ಕಾರ್ಯದಲ್ಲಿ ಪುರವಂಕರ ಕಂಪನಿ ಕೈಜೋಡಿಸಿದೆ.</p>.<p>‘ಈ ಪ್ರತಿಷ್ಠಿತ ಪ್ರಶಸ್ತಿಯು ನಮ್ಮ ಕಂಪನಿಯ ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ನಿರ್ವಹಣೆಗೆ ಸಾಕ್ಷಿಯಾಗಿದೆ. ‘ದಶಲಕ್ಷ ಇಂಗು ಬಾವಿಗಳ’ ಅಭಿಯಾನವು ನಗರದಲ್ಲಿ ಕುಸಿಯುತ್ತಿರುವ ನೀರಿನ ಮಟ್ಟವನ್ನು ತಡೆಯುವ ಗುರಿಯನ್ನು ಹೊಂದಿದೆ‘ ಎಂದು ಪುರವಂಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಶಿಶ್ ಪುರವಂಕರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತೆರೆದ ಬಾವಿಗಳ ಪುನರುಜ್ಜೀವನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪುರವಂಕರ ಕಂಪನಿಗೆ ‘ಸಿಐಡಿಸಿ ವಿಶ್ವಕರ್ಮ ಪ್ರಶಸ್ತಿ’ ದೊರೆತಿದೆ. </p>.<p>ನಿರ್ಮಾಣ ಉದ್ಯಮ ಅಭಿವೃದ್ಧಿ ಮಂಡಳಿಯು (ಸಿಐಡಿಸಿ) ನವದೆಹಲಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 15ನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯು ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.</p>.<p>ಬೆಂಗಳೂರಿನ ಬಯೋ ಎನ್ವಿರಾನ್ಮೆಂಟಲ್ ಟ್ರಸ್ಟ್ ಹಮ್ಮಿಕೊಂಡಿರುವ ‘ಬೆಂಗಳೂರಿಗಾಗಿ ದಶಲಕ್ಷ ಇಂಗು ಬಾವಿಗಳು’ ಅಭಿಯಾನದಡಿ ತೆರೆದ ಬಾವಿಗಳನ್ನು ಪುನಶ್ಚೇತನಗೊಳಿಸುವ ಕಾರ್ಯದಲ್ಲಿ ಪುರವಂಕರ ಕಂಪನಿ ಕೈಜೋಡಿಸಿದೆ.</p>.<p>‘ಈ ಪ್ರತಿಷ್ಠಿತ ಪ್ರಶಸ್ತಿಯು ನಮ್ಮ ಕಂಪನಿಯ ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ನಿರ್ವಹಣೆಗೆ ಸಾಕ್ಷಿಯಾಗಿದೆ. ‘ದಶಲಕ್ಷ ಇಂಗು ಬಾವಿಗಳ’ ಅಭಿಯಾನವು ನಗರದಲ್ಲಿ ಕುಸಿಯುತ್ತಿರುವ ನೀರಿನ ಮಟ್ಟವನ್ನು ತಡೆಯುವ ಗುರಿಯನ್ನು ಹೊಂದಿದೆ‘ ಎಂದು ಪುರವಂಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಶಿಶ್ ಪುರವಂಕರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>