<p><strong>ಬೆಂಗಳೂರು</strong>: ‘ಮಕ್ಕಳು ಸಮಾಜದ ಅತ್ಯಂತ ದುರ್ಬಲ ವರ್ಗಕ್ಕೆ ಸೇರುತ್ತಾರೆ. ಅವರ ಸುರಕ್ಷತೆ ಬಗ್ಗೆ ಹೆಚ್ಚು ಗಮನಹರಿಸಬೇಕು’ ಎಂದು ಡಾ. ವಿಜಯಲಕ್ಷ್ಮಿ ದೇಶಮಾನೆ ಸಲಹೆ ನೀಡಿದರು.</p>.<p>ಸಿಐಐ ಯಂಗ್ ಇಂಡಿಯನ್ಸ್(ಸಿಐಐ–ವೈಐ) ಸಂಸ್ಥೆಯ ‘ಮಾಸೂಮ್’ ಯೋಜನೆಯಡಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮತ್ತು ಮಕ್ಕಳ ಸುರಕ್ಷತೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಸುರಕ್ಷತೆ ನೀಡುವುದು ಸೌಲಭ್ಯವಾಗಿರದೇ, ಅದೊಂದು ಹಕ್ಕಾಗಬೇಕು. ಮನೆ, ಶಾಲೆ ಮತ್ತು ಸಮುದಾಯಗಳಲ್ಲಿ ಮಕ್ಕಳಿಗೆ ಸುರಕ್ಷಿತ ಪರಿಸರವನ್ನು ರೂಪಿಸಲು ಇಂಥ ಸಂವಾದಗಳು ನಿರ್ಣಾಯಕವಾಗುತ್ತವೆ ಎಂದು ತಿಳಿಸಿದರು.</p>.<p>ಸಿಐಐ ಯಂಗ್ ಇಂಡಿಯಾ ಸಂಸ್ಥೆಯ ಬೆಂಗಳೂರು ಚಾಪ್ಟರ್ನ ಅಧ್ಯಕ್ಷೆ ಪೂಜಿತಾ ಪ್ರಸಾದ್, ‘ಮಾಸೂಮ್’ ಎಂಬುದು ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಗಾಗಿ ರೂಪಿಸಿರುವ ಯೋಜನೆಯಾಗಿದೆ. ಕಳೆದ ದಶಕದಲ್ಲಿ ಈ ಕುರಿತು ಜಾಗೃತಿ ಅಭಿಯಾನ, ಶಿಕ್ಷಕರಿಗೆ ತರಬೇತಿ ಮತ್ತು ಇಂಥ ಪ್ರಕರಣಗಳ ಪರ ವಕಾಲತ್ತು ವಹಿಸುವ ಮೂಲಕ ನೂರಾರು ಕುಟುಂಬಗಳಿಗೆ ನೆರವಾಗಿದ್ದೇವೆ. ಕರ್ನಾಟಕದಲ್ಲಿ ಮಕ್ಕಳಿಗೆ ಸುರಕ್ಷಿತ ಪರಿಸರ ನಿರ್ಮಿಸುವ ಭರವಸೆ ನೀಡುವುದೇ ಈ ಸಮ್ಮೇಳನದ ಉದ್ದೇಶ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಗೋಷ್ಠಿಗಳಲ್ಲಿ ಮಕ್ಕಳನ್ನು ರಕ್ಷಿಸುವುದು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ತಡೆಯುವ ಕುರಿತು ಚರ್ಚೆ ನಡೆಯಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞರು ಕಾನೂನಿನ ನಿರ್ಬಂಧಗಳ ಬಗ್ಗೆಯೂ ವಿಚಾರಗಳನ್ನು ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಕ್ಕಳು ಸಮಾಜದ ಅತ್ಯಂತ ದುರ್ಬಲ ವರ್ಗಕ್ಕೆ ಸೇರುತ್ತಾರೆ. ಅವರ ಸುರಕ್ಷತೆ ಬಗ್ಗೆ ಹೆಚ್ಚು ಗಮನಹರಿಸಬೇಕು’ ಎಂದು ಡಾ. ವಿಜಯಲಕ್ಷ್ಮಿ ದೇಶಮಾನೆ ಸಲಹೆ ನೀಡಿದರು.</p>.<p>ಸಿಐಐ ಯಂಗ್ ಇಂಡಿಯನ್ಸ್(ಸಿಐಐ–ವೈಐ) ಸಂಸ್ಥೆಯ ‘ಮಾಸೂಮ್’ ಯೋಜನೆಯಡಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮತ್ತು ಮಕ್ಕಳ ಸುರಕ್ಷತೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಸುರಕ್ಷತೆ ನೀಡುವುದು ಸೌಲಭ್ಯವಾಗಿರದೇ, ಅದೊಂದು ಹಕ್ಕಾಗಬೇಕು. ಮನೆ, ಶಾಲೆ ಮತ್ತು ಸಮುದಾಯಗಳಲ್ಲಿ ಮಕ್ಕಳಿಗೆ ಸುರಕ್ಷಿತ ಪರಿಸರವನ್ನು ರೂಪಿಸಲು ಇಂಥ ಸಂವಾದಗಳು ನಿರ್ಣಾಯಕವಾಗುತ್ತವೆ ಎಂದು ತಿಳಿಸಿದರು.</p>.<p>ಸಿಐಐ ಯಂಗ್ ಇಂಡಿಯಾ ಸಂಸ್ಥೆಯ ಬೆಂಗಳೂರು ಚಾಪ್ಟರ್ನ ಅಧ್ಯಕ್ಷೆ ಪೂಜಿತಾ ಪ್ರಸಾದ್, ‘ಮಾಸೂಮ್’ ಎಂಬುದು ಮಕ್ಕಳ ಸುರಕ್ಷತೆ ಮತ್ತು ರಕ್ಷಣೆಗಾಗಿ ರೂಪಿಸಿರುವ ಯೋಜನೆಯಾಗಿದೆ. ಕಳೆದ ದಶಕದಲ್ಲಿ ಈ ಕುರಿತು ಜಾಗೃತಿ ಅಭಿಯಾನ, ಶಿಕ್ಷಕರಿಗೆ ತರಬೇತಿ ಮತ್ತು ಇಂಥ ಪ್ರಕರಣಗಳ ಪರ ವಕಾಲತ್ತು ವಹಿಸುವ ಮೂಲಕ ನೂರಾರು ಕುಟುಂಬಗಳಿಗೆ ನೆರವಾಗಿದ್ದೇವೆ. ಕರ್ನಾಟಕದಲ್ಲಿ ಮಕ್ಕಳಿಗೆ ಸುರಕ್ಷಿತ ಪರಿಸರ ನಿರ್ಮಿಸುವ ಭರವಸೆ ನೀಡುವುದೇ ಈ ಸಮ್ಮೇಳನದ ಉದ್ದೇಶ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಗೋಷ್ಠಿಗಳಲ್ಲಿ ಮಕ್ಕಳನ್ನು ರಕ್ಷಿಸುವುದು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ತಡೆಯುವ ಕುರಿತು ಚರ್ಚೆ ನಡೆಯಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞರು ಕಾನೂನಿನ ನಿರ್ಬಂಧಗಳ ಬಗ್ಗೆಯೂ ವಿಚಾರಗಳನ್ನು ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>