<p><strong>ಬೆಂಗಳೂರು</strong>: ‘ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನವು (ಸಿಐಐಎಲ್) ಕನ್ನಡ ವಿದ್ವಾಂಸರಿಗೆ ಪ್ರಶಸ್ತಿ ನೀಡಲು ವಿಳಂಬ ಮಾಡುತ್ತಿದ್ದು, ಇದು ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಕನ್ನಡ ಭಾಷೆಯ ಅಧ್ಯಯನ, ಸಂಶೋಧನೆ ಮತ್ತು ಪ್ರಚಾರಕ್ಕಾಗಿ ಪ್ರತಿ ವರ್ಷ ನೀಡಬೇಕಾದ ಪ್ರಶಸ್ತಿಗಳನ್ನು ನಿಯಮಿತವಾಗಿ ನೀಡದೆ, ಕನ್ನಡ ಭಾಷೆಗೆ ನಿರಂತರ ಅನ್ಯಾಯವೆಸಗುತ್ತಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕಳೆದ ವರ್ಷ ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಷಯ ಚರ್ಚಿಸಲಾಗಿತ್ತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದರೂ, ಈವರೆಗೂ ಯಾವುದೇ ಫಲಿತಾಂಶ ದೊರಕದಿರುವುದು ಕೇಂದ್ರದ ನಿಷ್ಕ್ರಿಯತೆಗೆ ಉದಾಹರಣೆ’ ಎಂದು ಹೇಳಿದ್ದಾರೆ.</p>.<p>‘2019ರಲ್ಲಿ ಅಧ್ಯಕ್ಷೀಯ, ಮಹರ್ಷಿ ಬಾದರಾಯಣ, ವ್ಯಾಸ ಸಮ್ಮಾನ್ ಸೇರಿ ವಿವಿಧ ಪ್ರಶಸ್ತಿಗಳನ್ನು ಸಿಐಐಎಲ್ ನೀಡಿದೆ. ಬಳಿಕ ಏಳು ವರ್ಷಗಳು ಕಳೆದರೂ ಪ್ರಶಸ್ತಿ ಪ್ರಕ್ರಿಯೆಯನ್ನೇ ಆರಂಭಿಸಿಲ್ಲ. ಕನ್ನಡ ಸಾಹಿತ್ಯ ಲೋಕದಲ್ಲಿ ಅರ್ಹರಿಲ್ಲ ಎನ್ನುವ ತೀರ್ಮಾನಕ್ಕೆ ಈ ಸಂಸ್ಥೆ ಬಂದಿರಬಹುದೇ ಎನ್ನುವ ಸಂದೇಹ ಸಂಸ್ಥೆ ಮೂಡಿಸುತ್ತಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನವು (ಸಿಐಐಎಲ್) ಕನ್ನಡ ವಿದ್ವಾಂಸರಿಗೆ ಪ್ರಶಸ್ತಿ ನೀಡಲು ವಿಳಂಬ ಮಾಡುತ್ತಿದ್ದು, ಇದು ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಕನ್ನಡ ಭಾಷೆಯ ಅಧ್ಯಯನ, ಸಂಶೋಧನೆ ಮತ್ತು ಪ್ರಚಾರಕ್ಕಾಗಿ ಪ್ರತಿ ವರ್ಷ ನೀಡಬೇಕಾದ ಪ್ರಶಸ್ತಿಗಳನ್ನು ನಿಯಮಿತವಾಗಿ ನೀಡದೆ, ಕನ್ನಡ ಭಾಷೆಗೆ ನಿರಂತರ ಅನ್ಯಾಯವೆಸಗುತ್ತಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕಳೆದ ವರ್ಷ ಭೇಟಿ ಮಾಡಿದ ಸಂದರ್ಭದಲ್ಲಿ ಈ ವಿಷಯ ಚರ್ಚಿಸಲಾಗಿತ್ತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದರೂ, ಈವರೆಗೂ ಯಾವುದೇ ಫಲಿತಾಂಶ ದೊರಕದಿರುವುದು ಕೇಂದ್ರದ ನಿಷ್ಕ್ರಿಯತೆಗೆ ಉದಾಹರಣೆ’ ಎಂದು ಹೇಳಿದ್ದಾರೆ.</p>.<p>‘2019ರಲ್ಲಿ ಅಧ್ಯಕ್ಷೀಯ, ಮಹರ್ಷಿ ಬಾದರಾಯಣ, ವ್ಯಾಸ ಸಮ್ಮಾನ್ ಸೇರಿ ವಿವಿಧ ಪ್ರಶಸ್ತಿಗಳನ್ನು ಸಿಐಐಎಲ್ ನೀಡಿದೆ. ಬಳಿಕ ಏಳು ವರ್ಷಗಳು ಕಳೆದರೂ ಪ್ರಶಸ್ತಿ ಪ್ರಕ್ರಿಯೆಯನ್ನೇ ಆರಂಭಿಸಿಲ್ಲ. ಕನ್ನಡ ಸಾಹಿತ್ಯ ಲೋಕದಲ್ಲಿ ಅರ್ಹರಿಲ್ಲ ಎನ್ನುವ ತೀರ್ಮಾನಕ್ಕೆ ಈ ಸಂಸ್ಥೆ ಬಂದಿರಬಹುದೇ ಎನ್ನುವ ಸಂದೇಹ ಸಂಸ್ಥೆ ಮೂಡಿಸುತ್ತಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>