‘ಬಡವರ ಪರ’ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರದ ಈ ನಡೆ ಅಚ್ಚರಿ ಮೂಡಿಸಿದೆ. ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ, ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಒದಗಿಸುವುದು, ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡುವುದು, ಸಮುದಾಯದ ಜನರಿಗೆ ಶಿಕ್ಷಣ, ವಸತಿ, ಗೃಹಸಾಲ, ಹೈನುಗಾರಿಕೆ, ಸ್ವ ಉದ್ಯೋಗ ಸೌಲಭ್ಯ ಕಲ್ಪಿಸುವುದು... ಹೀಗೆ ಈ ಸಮುದಾಯದವರ ಅಭಿವೃದ್ಧಿ ಯೋಜನೆಗಳಿಗಾಗಿ ವ್ಯಯಿಸಬೇಕಿದ್ದ ಹಣವನ್ನು ರೈತರ ಸಾಲ ಮನ್ನಾಕ್ಕೆ ಬಳಸಿರುವುದು ವಿಪರ್ಯಾಸ.