‘ಸ್ವಾಮೀಜಿಗಳಾದವರು ಅರಿಷಡ್ವರ್ಗಗಳನ್ನು ಬಿಡುತ್ತಾರೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗುವುದಕ್ಕಾಗಿ ಯೋಗಿ ಆದಿತ್ಯನಾಥ ಅವರು ಧರ್ಮವನ್ನೇ ಬಿಟ್ಟಿದ್ದಾರೆ’ ಎಂದು ಟೀಕಿಸಿದ ಅವರು, ‘ಟಿಪ್ಪು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ಯೋಧ. ಅವರನ್ನು ಟೀಕಿಸುವ ಆದಿತ್ಯನಾಥ ಅವರಿಗೆ ಸ್ವಾತಂತ್ರ್ಯ ಇತಿಹಾಸ ಗೊತ್ತಿಲ್ಲ’ ಎಂದರು.