ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಹಾರ ಕಿಟ್‌ ಅವ್ಯವಹಾರ ತನಿಖೆಗೆ ಆಗ್ರಹ- ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

Last Updated 13 ಜುಲೈ 2021, 7:16 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಆಹಾರ ಕಿಟ್‌ ಹಂಚಿಕೆಯಲ್ಲಿ ಅವ್ಯವಹಾರವಾಗಿದ್ದು, ಇದರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಸೋಮವಾರ ಪ್ರತಿಭಟನೆ ಮಾಡಿದರು.

ನಗರ ಮಾತ್ರವಲ್ಲದೆ, ತುಮಕೂರು, ಕೋಲಾರ, ಕಲಬುರ್ಗಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಮಂಡ್ಯ, ಧಾರವಾಡ ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಕಾರ್ಮಿಕರು ಪ್ರತಿಭಟಿಸಿದರು.

ಕಾರ್ಮಿಕರಿಂದ ಮನವಿ ಸ್ವೀಕರಿಸಿದ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ, ಕಾರ್ಮಿಕರ ಸಮನ್ವಯ ಸಮಿತಿ ಮುಖಂಡರ ಜೊತೆ ಮಾತುಕತೆ ನಡೆಸಿದರು.

ಬಾಕಿ ಇರುವ ಕೊವೀಡ್ ಪರಿಹಾರ, ಆಹಾರ ಕಿಟ್ ಹಂಚಿಕೆಯನ್ನು ಶಾಸಕರಿಗೆ ವಹಿಸಿರುವುದು, ವೈದ್ಯಕೀಯ ಪರಿಹಾರ, ಮನೆಗೆ ಧನಸಹಾಯ ಪಿಂಚಣಿ ಸೇರಿ ಇತ್ಯಾದಿ ಅಂಶಗಳ ಕುರಿತು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲು ಸಮನ್ವಯ ಸಮಿತಿ ಮುಖಂಡರು ಆಗ್ರಹಿಸಿದರು.

ಸಮನ್ವಯ ಸಮಿತಿಯ ಮುಖಂಡರಾದ ಕೆ.ಮಹಾಂತೇಶ, ಶಾಮಣ್ಣ ರೆಡ್ಡಿ ಎನ್.ಪಿ ಸ್ವಾಮಿ, ನಾಗನಾಥ್, ಅಪ್ಪಣ್ಣ,‌ ಲಿಂಗರಾಜ್, ಲಕ್ಷ್ಮೀ, ಲಕ್ಷ್ಮಣ್‌ ಕುಮಾರ್,‌ ವಿನಯ್ ಶ್ರೀನಿವಾಸ್, ಲೀಲಾವತಿ ಧನಶೇಖರ್, ಹನುಮೇಶ್, ಶ್ರೀಕಾಂತ, ಹರೀಶಕುಮಾರ್, ಹನುಮಂತರಾವ್ ಹವಾಲ್ದಾರ್ ಸೇರಿ ಹಲವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT