<p><strong>ಬೆಂಗಳೂರು: </strong>ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಆಹಾರ ಕಿಟ್ ಹಂಚಿಕೆಯಲ್ಲಿ ಅವ್ಯವಹಾರವಾಗಿದ್ದು, ಇದರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಸೋಮವಾರ ಪ್ರತಿಭಟನೆ ಮಾಡಿದರು.</p>.<p>ನಗರ ಮಾತ್ರವಲ್ಲದೆ, ತುಮಕೂರು, ಕೋಲಾರ, ಕಲಬುರ್ಗಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಮಂಡ್ಯ, ಧಾರವಾಡ ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಕಾರ್ಮಿಕರು ಪ್ರತಿಭಟಿಸಿದರು.</p>.<p>ಕಾರ್ಮಿಕರಿಂದ ಮನವಿ ಸ್ವೀಕರಿಸಿದ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ, ಕಾರ್ಮಿಕರ ಸಮನ್ವಯ ಸಮಿತಿ ಮುಖಂಡರ ಜೊತೆ ಮಾತುಕತೆ ನಡೆಸಿದರು.</p>.<p>ಬಾಕಿ ಇರುವ ಕೊವೀಡ್ ಪರಿಹಾರ, ಆಹಾರ ಕಿಟ್ ಹಂಚಿಕೆಯನ್ನು ಶಾಸಕರಿಗೆ ವಹಿಸಿರುವುದು, ವೈದ್ಯಕೀಯ ಪರಿಹಾರ, ಮನೆಗೆ ಧನಸಹಾಯ ಪಿಂಚಣಿ ಸೇರಿ ಇತ್ಯಾದಿ ಅಂಶಗಳ ಕುರಿತು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲು ಸಮನ್ವಯ ಸಮಿತಿ ಮುಖಂಡರು ಆಗ್ರಹಿಸಿದರು.</p>.<p>ಸಮನ್ವಯ ಸಮಿತಿಯ ಮುಖಂಡರಾದ ಕೆ.ಮಹಾಂತೇಶ, ಶಾಮಣ್ಣ ರೆಡ್ಡಿ ಎನ್.ಪಿ ಸ್ವಾಮಿ, ನಾಗನಾಥ್, ಅಪ್ಪಣ್ಣ, ಲಿಂಗರಾಜ್, ಲಕ್ಷ್ಮೀ, ಲಕ್ಷ್ಮಣ್ ಕುಮಾರ್, ವಿನಯ್ ಶ್ರೀನಿವಾಸ್, ಲೀಲಾವತಿ ಧನಶೇಖರ್, ಹನುಮೇಶ್, ಶ್ರೀಕಾಂತ, ಹರೀಶಕುಮಾರ್, ಹನುಮಂತರಾವ್ ಹವಾಲ್ದಾರ್ ಸೇರಿ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ಆಹಾರ ಕಿಟ್ ಹಂಚಿಕೆಯಲ್ಲಿ ಅವ್ಯವಹಾರವಾಗಿದ್ದು, ಇದರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಸೋಮವಾರ ಪ್ರತಿಭಟನೆ ಮಾಡಿದರು.</p>.<p>ನಗರ ಮಾತ್ರವಲ್ಲದೆ, ತುಮಕೂರು, ಕೋಲಾರ, ಕಲಬುರ್ಗಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ಮಂಡ್ಯ, ಧಾರವಾಡ ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಕಾರ್ಮಿಕರು ಪ್ರತಿಭಟಿಸಿದರು.</p>.<p>ಕಾರ್ಮಿಕರಿಂದ ಮನವಿ ಸ್ವೀಕರಿಸಿದ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ, ಕಾರ್ಮಿಕರ ಸಮನ್ವಯ ಸಮಿತಿ ಮುಖಂಡರ ಜೊತೆ ಮಾತುಕತೆ ನಡೆಸಿದರು.</p>.<p>ಬಾಕಿ ಇರುವ ಕೊವೀಡ್ ಪರಿಹಾರ, ಆಹಾರ ಕಿಟ್ ಹಂಚಿಕೆಯನ್ನು ಶಾಸಕರಿಗೆ ವಹಿಸಿರುವುದು, ವೈದ್ಯಕೀಯ ಪರಿಹಾರ, ಮನೆಗೆ ಧನಸಹಾಯ ಪಿಂಚಣಿ ಸೇರಿ ಇತ್ಯಾದಿ ಅಂಶಗಳ ಕುರಿತು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲು ಸಮನ್ವಯ ಸಮಿತಿ ಮುಖಂಡರು ಆಗ್ರಹಿಸಿದರು.</p>.<p>ಸಮನ್ವಯ ಸಮಿತಿಯ ಮುಖಂಡರಾದ ಕೆ.ಮಹಾಂತೇಶ, ಶಾಮಣ್ಣ ರೆಡ್ಡಿ ಎನ್.ಪಿ ಸ್ವಾಮಿ, ನಾಗನಾಥ್, ಅಪ್ಪಣ್ಣ, ಲಿಂಗರಾಜ್, ಲಕ್ಷ್ಮೀ, ಲಕ್ಷ್ಮಣ್ ಕುಮಾರ್, ವಿನಯ್ ಶ್ರೀನಿವಾಸ್, ಲೀಲಾವತಿ ಧನಶೇಖರ್, ಹನುಮೇಶ್, ಶ್ರೀಕಾಂತ, ಹರೀಶಕುಮಾರ್, ಹನುಮಂತರಾವ್ ಹವಾಲ್ದಾರ್ ಸೇರಿ ಹಲವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>