ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌತ್‌ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ಸಂಭ್ರಮದ ರಥಯಾತ್ರೆ

Published 24 ಜೂನ್ 2023, 16:26 IST
Last Updated 24 ಜೂನ್ 2023, 16:26 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಬನ್ನೇರುಘಟ್ಟ ಮುಖ್ಯರಸ್ತೆಯ ಸೌತ್‌ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ಶನಿವಾರ ಜಗನ್ನಾಥ ರಥಯಾತ್ರೆಯು ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.

ಸೌತ್‌ ಸಿಟಿ ಓಡಿಯಾ ಸಮಿತಿ (ಉತ್ಕಲ) ಹಾಗೂ ಸುಗೃಹ (ಸೌತ್‌ ಸಿಟಿ ಗ್ರೂಪ್‌ ಹೌಸಿಂಗ್ ಅಪಾರ್ಟ್‌ಮೆಂಟ್‌ ಓನರ್ಸ್ ಅಸೋಸಿಯೇಷನ್‌) ಸಹಯೋಗದಲ್ಲಿ ಮೂರನೇ ವರ್ಷದ ರಥಯಾತ್ರೆ ನಡೆಯಿತು.

ಅಪಾರ್ಟ್‌ಮೆಂಟ್ ನಿವಾಸಿಗಳು ಜಗನ್ನಾಥ, ಬಾಲಭದ್ರ, ಸುಭದ್ರರನ್ನು ಭಕ್ತಿಯಿಂದ ಬರಮಾಡಿಕೊಂಡರು. ಪೂಜೆ ಹಾಗೂ ಆರತಿ ನೆರವೇರಿತು. ನೂರಾರು ಮಂದಿ ರಥ ಎಳೆದು ಭಕ್ತಿ ಸಮರ್ಪಿಸಿದರು.  ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT