ಈ ವರ್ಷದ ಮಾರ್ಚ್ ಮೂರನೇ ವಾರದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡಿತ್ತು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದವು. ಹೀಗಾಗಿ ಆಮ್ಲಜನಕದ ಅಭಾವ ಸೃಷ್ಟಿಯಾಗಿತ್ತು. ಆಮ್ಲಜನಕ ಸಹಿತ ಹಾಸಿಗೆಗಳ ಸಮಸ್ಯೆಯೂ ತಲೆದೋರಿತ್ತು. ಆಗಸ್ಟ್ ಬಳಿಕ ಇತರ ಜಿಲ್ಲೆಗಳಲ್ಲಿ ಪ್ರಕರಣಗಳು ಕಡಿಮೆಯಾದರೂ ಬೆಂಗಳೂರಿನಲ್ಲಿ ಮಾತ್ರ ಸಾವಿರದ ಆಸುಪಾಸಿನಲ್ಲೇ ಇದ್ದವು. ಸೆಪ್ಟೆಂಬರ್ ನಂತರ ಹೊಸ ಪ್ರಕರಣಗಳು ಇಳಿಮುಖವಾಗಿದ್ದವು.