<p><strong>ಬೆಂಗಳೂರು</strong>: ‘ದೇಶದ ಭವಿಷ್ಯ ಯುವಜನರ ಕೈಯಲ್ಲಿದ್ದು, ದೇಶ ಕಟ್ಟಲು ನಿಜವಾದ ಎಂಜಿನಿಯರ್ಗಳ ಅಗತ್ಯವಿದೆ’ ಎಂದು ಟಾಟಾ ರಿಸರ್ಚ್, ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ನ (ಟಿಸಿಎಸ್) ಮುಖ್ಯ ವಿಜ್ಞಾನಿ ಎಂ. ಗಿರೀಶ್ ಚಂದ್ರ ಅಭಿಮತ ವ್ಯಕ್ತಪಡಿಸಿದರು. </p>.<p>ಕನಕಪುರ ರಸ್ತೆಯಲಿರುವ ಸಿಟಿ ಎಂಜಿನಿಯರಿಂಗ್ ಕಾಲೇಜು ಶನಿವಾರ ಹಮ್ಮಿಕೊಂಡಿದ್ದ ಘಟಿಕೋತ್ಸವ ಸಮಾರಂಭದಲ್ಲಿ 250 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಈ ವೇಳೆ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ವಿದ್ಯಾರ್ಥಿಗಳಿಗೆ ಜ್ಞಾನ ಆಧಾರಿತ ಶಿಕ್ಷಣ ನೀಡಬೇಕು. ಎಂಜಿನಿಯರಿಂಗ್, ವಿಜ್ಞಾನ, ಗಣಿತ ಸೇರಿದಂತೆ ವಿವಿಧ ಕ್ಷೇತ್ರಗಳ ಬಗ್ಗೆಯೂ ತಿಳಿದುಕೊಳ್ಳಬೇಕು. ಜ್ಞಾನ ಆಧರಿತ ಶಿಕ್ಷಣದ ಜತೆಗೆ ಕಾಲ್ಪನಿಕತೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>‘ಕಲಿಕೆ ನಿರಂತರವಾದ ಪ್ರಕ್ರಿಯೆಯಾಗಿದೆ. ಶಿಕ್ಷಣ ಸಂಸ್ಥೆಗಳಿಂದ ಹೊರ ಬರುತ್ತಿರುವ ಪದವೀಧರರು, ಕಂಪನಿಗಳ ನಿರೀಕ್ಷೆಯನ್ನು ಪೂರೈಸುತ್ತಿಲ್ಲ. ಹೀಗಾಗಿ, ಅವರಿಗೆ ಹೆಚ್ಚಿನ ಕೌಶಲ ಮತ್ತು ತರಬೇತಿ ನೀಡಬೇಕಿದೆ’ ಎಂದು ಹೇಳಿದರು. </p>.<p>ಎಎಂಸಿ, ಸಿಟಿ, ಕೇಂಬ್ರಿಜ್ ಮತ್ತು ಬ್ರೂಕ್ಲಿನ್ ಸಂಸ್ಥೆಗಳ ಅಧ್ಯಕ್ಷ ಕೆ.ಆರ್. ಪರಮಹಂಸ, ಉಪಾಧ್ಯಕ್ಷೆ ಕೆ. ಗೀತಾ ಪರಮಹಂಸ, ಕಾಲೇಜಿನ ಪ್ರಾಂಶುಪಾಲ ಎಸ್. ಕರುಣಾಕರ ಮತ್ತು ಮುಖ್ಯಸ್ಥೆ ಸೌಮ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೇಶದ ಭವಿಷ್ಯ ಯುವಜನರ ಕೈಯಲ್ಲಿದ್ದು, ದೇಶ ಕಟ್ಟಲು ನಿಜವಾದ ಎಂಜಿನಿಯರ್ಗಳ ಅಗತ್ಯವಿದೆ’ ಎಂದು ಟಾಟಾ ರಿಸರ್ಚ್, ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ನ (ಟಿಸಿಎಸ್) ಮುಖ್ಯ ವಿಜ್ಞಾನಿ ಎಂ. ಗಿರೀಶ್ ಚಂದ್ರ ಅಭಿಮತ ವ್ಯಕ್ತಪಡಿಸಿದರು. </p>.<p>ಕನಕಪುರ ರಸ್ತೆಯಲಿರುವ ಸಿಟಿ ಎಂಜಿನಿಯರಿಂಗ್ ಕಾಲೇಜು ಶನಿವಾರ ಹಮ್ಮಿಕೊಂಡಿದ್ದ ಘಟಿಕೋತ್ಸವ ಸಮಾರಂಭದಲ್ಲಿ 250 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಈ ವೇಳೆ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ವಿದ್ಯಾರ್ಥಿಗಳಿಗೆ ಜ್ಞಾನ ಆಧಾರಿತ ಶಿಕ್ಷಣ ನೀಡಬೇಕು. ಎಂಜಿನಿಯರಿಂಗ್, ವಿಜ್ಞಾನ, ಗಣಿತ ಸೇರಿದಂತೆ ವಿವಿಧ ಕ್ಷೇತ್ರಗಳ ಬಗ್ಗೆಯೂ ತಿಳಿದುಕೊಳ್ಳಬೇಕು. ಜ್ಞಾನ ಆಧರಿತ ಶಿಕ್ಷಣದ ಜತೆಗೆ ಕಾಲ್ಪನಿಕತೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>‘ಕಲಿಕೆ ನಿರಂತರವಾದ ಪ್ರಕ್ರಿಯೆಯಾಗಿದೆ. ಶಿಕ್ಷಣ ಸಂಸ್ಥೆಗಳಿಂದ ಹೊರ ಬರುತ್ತಿರುವ ಪದವೀಧರರು, ಕಂಪನಿಗಳ ನಿರೀಕ್ಷೆಯನ್ನು ಪೂರೈಸುತ್ತಿಲ್ಲ. ಹೀಗಾಗಿ, ಅವರಿಗೆ ಹೆಚ್ಚಿನ ಕೌಶಲ ಮತ್ತು ತರಬೇತಿ ನೀಡಬೇಕಿದೆ’ ಎಂದು ಹೇಳಿದರು. </p>.<p>ಎಎಂಸಿ, ಸಿಟಿ, ಕೇಂಬ್ರಿಜ್ ಮತ್ತು ಬ್ರೂಕ್ಲಿನ್ ಸಂಸ್ಥೆಗಳ ಅಧ್ಯಕ್ಷ ಕೆ.ಆರ್. ಪರಮಹಂಸ, ಉಪಾಧ್ಯಕ್ಷೆ ಕೆ. ಗೀತಾ ಪರಮಹಂಸ, ಕಾಲೇಜಿನ ಪ್ರಾಂಶುಪಾಲ ಎಸ್. ಕರುಣಾಕರ ಮತ್ತು ಮುಖ್ಯಸ್ಥೆ ಸೌಮ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>