‘ಬೆಂಗಳೂರು ನಗರದಲ್ಲಿ ಮುಂದಿನ ದಿನಗಳಲ್ಲಿ ನೀರಿನ ತೀವ್ರ ಸಮಸ್ಯೆ ಎದುರಾಗಲಿದ್ದು, ಜಲಮೂಲಗಳನ್ನು ಮತ್ತು ಕೆರೆ, ಕಟ್ಟೆಗಳನ್ನು ಸಂರಕ್ಷಣೆ ಮಾಡಬೇಕಾದ ಅನಿವಾರ್ಯ ಇದೆ. ನೇರವಾಗಿ ಸಂಸ್ಕರಣೆ ಮಾಡದೆ ತ್ಯಾಜ್ಯ ಹರಿಸುತ್ತಿರುವುದರಿಂದ ಕೆರೆಗಳ ನೀರು ಕಲುಷಿತವಾಗಿ ನೊರೆ ಹೊರಹೊಮ್ಮುವ ಸ್ಥಿತಿ ನಿರ್ಮಾಣವಾಗಿದೆ. ಅಂತರ್ಜಲವೂ ಕಲುಷಿತವಾಗುತ್ತಿದೆ. ಈ ಪ್ರಕರಣವನ್ನು ಎನ್ಜಿಟಿ ಗಂಭೀರವಾಗಿ ಪರಿಗಣಿಸಿ, ದಂಡ ವಿಧಿಸಿದ್ದರೂ ಸಂಸ್ಕರಣಾ ಘಟಕ ನಿರ್ಮಾಣದಲ್ಲಿ ವಿಳಂಬ ಆಗುತ್ತಿರುವುದು ಸರಿಯಲ್ಲ’ ಎಂದರು.