<p><strong>ಬೆಂಗಳೂರು:</strong> ನಗರ ಪೊಲೀಸ್ ಇಲಾಖೆಯಿಂದ ಜಾರಿಗೆ ತಂದಿರುವ ‘ನಾವು –ನೀವು, ನೆರೆ–ಹೊರೆ ಕಾವಲು ಪಡೆ’ಗೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಚಾಲನೆ ನೀಡಿದರು.</p>.<p>ವಿಜಯನಗರದಲ್ಲಿ ಶನಿವಾರ ನಡೆದ ತಿಂಗಳ ಜನಸಂಪರ್ಕ ಸಭೆಯಲ್ಲಿ ಅವರು ನೂತನ ಯೋಜನೆಗೆ ಚಾಲನೆ ನೀಡಿದರು.</p>.<p>‘ನಾವು–ನೀವು, ನೆರೆ–ಹೊರೆ ಕಾವಲು ಪಡೆ’ಗೆ ಪ್ರತಿ ಠಾಣಾ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಮಂದಿ ಸ್ಥಳೀಯರನ್ನು ಆಯ್ಕೆ ಮಾಡಿಕೊಂಡಿದ್ದು, ಆ ವ್ಯಕ್ತಿಯ ಪೂರ್ವಾಪರ ಪರಿಶೀಲಿಸಲಾಗಿದೆ. ಅಲ್ಲದೆ, ಅವರಿಗೆ ಗುರುತಿನ ಚೀಟಿ ಹಾಗೂ ಟೀ–ಶರ್ಟ್ ವಿತರಣೆ ಮಾಡಲಾಗಿದೆ. ಬಿಡುವಿನ ವೇಳೆಯಲ್ಲಿ ನೇಮಕವಾದ ವ್ಯಕ್ತಿ ರಾತ್ರಿ ಪೊಲೀಸರೊಂದಿಗೆ ಗಸ್ತು ನಡೆಸುತ್ತಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>‘ಡ್ರಗ್ಸ್, ಸಂಚಾರ ಸೇರಿ ಇಲಾಖೆಯ ಜಾಗೃತಿ ಕಾರ್ಯಕ್ರಮಗಳಲ್ಲಿ ಅರಿವು ಮೂಡಿಸುತ್ತಾರೆ. ಸಂಚಾರ ದಟ್ಟಣೆ ಸಂದರ್ಭದಲ್ಲೂ ಅವರನ್ನು ಬಳಸಿಕೊಳ್ಳಲಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಗೆ ಎರಡರಿಂದ ಮೂರು ಪ್ರದೇಶದ ಹೊಣೆ ನೀಡಲಾಗಿದೆ. ಅವರು ಆ ಪ್ರದೇಶದಲ್ಲಿನ ಅಪರಾಧ, ಬೇರೆ ಬೇರೆ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಸದ್ಯ ಆ ವ್ಯಕ್ತಿಗೆ ಯಾವುದೇ ಸಂಭಾವನೆ ನೀಡುವುದಿಲ್ಲ. ಸ್ವಯಂ ಪ್ರೇರಿತವಾಗಿ ನೇಮಕಗೊಂಡಿದ್ದಾರೆ’ ಎಂದು ಹೇಳಿದರು.</p>.<p>ಜನಸಂಪರ್ಕ ಸಭೆಯಲ್ಲಿ ಕಂದಾಯ ನಿವೇಶನ ಮಾರಾಟ, ವ್ಹೀಲಿ, ವಾಹನ ನಿಲುಗಡೆ, ಸಂಚಾರ ದಟ್ಟಣೆ, ಕಾಮಗಾರಿ ವಿಳಂಬ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು.</p>.<p>ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್, ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್, ಸಂಚಾರ ವಿಭಾಗದ ಡಿಸಿಪಿ ಅನಿತಾ ಹದಣ್ಣನವರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಪೊಲೀಸ್ ಇಲಾಖೆಯಿಂದ ಜಾರಿಗೆ ತಂದಿರುವ ‘ನಾವು –ನೀವು, ನೆರೆ–ಹೊರೆ ಕಾವಲು ಪಡೆ’ಗೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಚಾಲನೆ ನೀಡಿದರು.</p>.<p>ವಿಜಯನಗರದಲ್ಲಿ ಶನಿವಾರ ನಡೆದ ತಿಂಗಳ ಜನಸಂಪರ್ಕ ಸಭೆಯಲ್ಲಿ ಅವರು ನೂತನ ಯೋಜನೆಗೆ ಚಾಲನೆ ನೀಡಿದರು.</p>.<p>‘ನಾವು–ನೀವು, ನೆರೆ–ಹೊರೆ ಕಾವಲು ಪಡೆ’ಗೆ ಪ್ರತಿ ಠಾಣಾ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಮಂದಿ ಸ್ಥಳೀಯರನ್ನು ಆಯ್ಕೆ ಮಾಡಿಕೊಂಡಿದ್ದು, ಆ ವ್ಯಕ್ತಿಯ ಪೂರ್ವಾಪರ ಪರಿಶೀಲಿಸಲಾಗಿದೆ. ಅಲ್ಲದೆ, ಅವರಿಗೆ ಗುರುತಿನ ಚೀಟಿ ಹಾಗೂ ಟೀ–ಶರ್ಟ್ ವಿತರಣೆ ಮಾಡಲಾಗಿದೆ. ಬಿಡುವಿನ ವೇಳೆಯಲ್ಲಿ ನೇಮಕವಾದ ವ್ಯಕ್ತಿ ರಾತ್ರಿ ಪೊಲೀಸರೊಂದಿಗೆ ಗಸ್ತು ನಡೆಸುತ್ತಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>‘ಡ್ರಗ್ಸ್, ಸಂಚಾರ ಸೇರಿ ಇಲಾಖೆಯ ಜಾಗೃತಿ ಕಾರ್ಯಕ್ರಮಗಳಲ್ಲಿ ಅರಿವು ಮೂಡಿಸುತ್ತಾರೆ. ಸಂಚಾರ ದಟ್ಟಣೆ ಸಂದರ್ಭದಲ್ಲೂ ಅವರನ್ನು ಬಳಸಿಕೊಳ್ಳಲಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಗೆ ಎರಡರಿಂದ ಮೂರು ಪ್ರದೇಶದ ಹೊಣೆ ನೀಡಲಾಗಿದೆ. ಅವರು ಆ ಪ್ರದೇಶದಲ್ಲಿನ ಅಪರಾಧ, ಬೇರೆ ಬೇರೆ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಾರೆ. ಸದ್ಯ ಆ ವ್ಯಕ್ತಿಗೆ ಯಾವುದೇ ಸಂಭಾವನೆ ನೀಡುವುದಿಲ್ಲ. ಸ್ವಯಂ ಪ್ರೇರಿತವಾಗಿ ನೇಮಕಗೊಂಡಿದ್ದಾರೆ’ ಎಂದು ಹೇಳಿದರು.</p>.<p>ಜನಸಂಪರ್ಕ ಸಭೆಯಲ್ಲಿ ಕಂದಾಯ ನಿವೇಶನ ಮಾರಾಟ, ವ್ಹೀಲಿ, ವಾಹನ ನಿಲುಗಡೆ, ಸಂಚಾರ ದಟ್ಟಣೆ, ಕಾಮಗಾರಿ ವಿಳಂಬ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು.</p>.<p>ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್, ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್, ಸಂಚಾರ ವಿಭಾಗದ ಡಿಸಿಪಿ ಅನಿತಾ ಹದಣ್ಣನವರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>