<p><strong>ಪೀಣ್ಯದಾಸರಹಳ್ಳಿ:</strong> ‘ಜಗತ್ತಿನಾದ್ಯಂತ ನೈಸರ್ಗಿಕ ಕಲ್ಲು ಉದ್ಯಮವನ್ನು ಉತ್ತೇಜಿಸುವುದು ಮತ್ತು ಉದ್ಯಮವು ಎದುರಿಸುತ್ತಿರುವ ಸಮಸ್ಯೆ<br />ಗಳನ್ನು ಪರಿಹರಿಸುವುದು ಒಕ್ಕೂಟದ ಉದ್ದೇಶ' ಎಂದು ಭಾರತೀಯ ಗ್ರಾನೈಟ್ ಮತ್ತು ಕಲ್ಲು ಉದ್ಯಮ ಒಕ್ಕೂಟದ (ಎಫ್ಐಜಿಎಸ್ಐ) ಅಧ್ಯಕ್ಷಈಶ್ವಿಂದರ್ ಸಿಂಗ್ ಹೇಳಿದರು.</p>.<p>ನಗರದ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಎಫ್ಐಜಿಎಸ್ಐ ವತಿಯಿಂದ ಆಯೋಜಿಸಲಾಗಿದ್ದ ‘ಸ್ಟೋನಾ-2020’ ಮೇಳದಲ್ಲಿ ಅವರು ಮಾತನಾಡಿದರು.</p>.<p>‘ಪ್ರಪಂಚದಾದ್ಯಂತ ಉತ್ಪತ್ತಿಯಾಗುವ ಕಲ್ಲುಗಳಲ್ಲಿ ಭಾರತದ ಪಾಲು ಶೇ.27ಕ್ಕಿಂತ ಹೆಚ್ಚು ಇದೆ. ಚಪ್ಪಡಿ, ಅಂಚು ಮತ್ತು ಸ್ಮಾರಕ ಕಲ್ಲುಗಳನ್ನು 90ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗುತ್ತಿದೆ’ ಎಂದರು.</p>.<p>‘ಕಲ್ಲಿನ ಉದ್ಯಮವು ಭಾರತೀಯ ಆರ್ಥಿಕತೆಯನ್ನು ಹೆಚ್ಚಿಸುವಲ್ಲಿ ಮತ್ತು ಕೃಷಿಯ ನಂತರ ಗ್ರಾಮೀಣ ವಲಯದಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸಲಿದೆ’ ಎಂದರು.</p>.<p>ಭಾನುವಾರ ನಡೆದ ಮೇಳದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಭಾಗವಹಿಸಿದ್ದರು. ದೇಶ–ವಿದೇಶಗಳ 550 ಪ್ರದರ್ಶಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯದಾಸರಹಳ್ಳಿ:</strong> ‘ಜಗತ್ತಿನಾದ್ಯಂತ ನೈಸರ್ಗಿಕ ಕಲ್ಲು ಉದ್ಯಮವನ್ನು ಉತ್ತೇಜಿಸುವುದು ಮತ್ತು ಉದ್ಯಮವು ಎದುರಿಸುತ್ತಿರುವ ಸಮಸ್ಯೆ<br />ಗಳನ್ನು ಪರಿಹರಿಸುವುದು ಒಕ್ಕೂಟದ ಉದ್ದೇಶ' ಎಂದು ಭಾರತೀಯ ಗ್ರಾನೈಟ್ ಮತ್ತು ಕಲ್ಲು ಉದ್ಯಮ ಒಕ್ಕೂಟದ (ಎಫ್ಐಜಿಎಸ್ಐ) ಅಧ್ಯಕ್ಷಈಶ್ವಿಂದರ್ ಸಿಂಗ್ ಹೇಳಿದರು.</p>.<p>ನಗರದ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಎಫ್ಐಜಿಎಸ್ಐ ವತಿಯಿಂದ ಆಯೋಜಿಸಲಾಗಿದ್ದ ‘ಸ್ಟೋನಾ-2020’ ಮೇಳದಲ್ಲಿ ಅವರು ಮಾತನಾಡಿದರು.</p>.<p>‘ಪ್ರಪಂಚದಾದ್ಯಂತ ಉತ್ಪತ್ತಿಯಾಗುವ ಕಲ್ಲುಗಳಲ್ಲಿ ಭಾರತದ ಪಾಲು ಶೇ.27ಕ್ಕಿಂತ ಹೆಚ್ಚು ಇದೆ. ಚಪ್ಪಡಿ, ಅಂಚು ಮತ್ತು ಸ್ಮಾರಕ ಕಲ್ಲುಗಳನ್ನು 90ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗುತ್ತಿದೆ’ ಎಂದರು.</p>.<p>‘ಕಲ್ಲಿನ ಉದ್ಯಮವು ಭಾರತೀಯ ಆರ್ಥಿಕತೆಯನ್ನು ಹೆಚ್ಚಿಸುವಲ್ಲಿ ಮತ್ತು ಕೃಷಿಯ ನಂತರ ಗ್ರಾಮೀಣ ವಲಯದಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸಲಿದೆ’ ಎಂದರು.</p>.<p>ಭಾನುವಾರ ನಡೆದ ಮೇಳದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಭಾಗವಹಿಸಿದ್ದರು. ದೇಶ–ವಿದೇಶಗಳ 550 ಪ್ರದರ್ಶಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>