<p><strong>ಬೆಂಗಳೂರು:</strong> ‘ಪೊಲೀಸರು ಹಣ ವಸೂಲಿಗಾರರಂತೆ ವರ್ತಿಸಬಾರದು’ ಎಂದು ಹೈಕೋರ್ಟ್ ಕಿಡಿ ಕಾರಿದೆ.</p>.<p>ಸಿವಿಲ್ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಎಸ್.ಚಂದ್ರಮೌಳಿ, ‘ಇದೊಂದು ಸಿವಿಲ್ ವ್ಯಾಜ್ಯ. ಪೊಲೀಸರು ಈ ಪ್ರಕರಣದ ತನಿಖೆ ನಡೆಸಿರುವುದು ತಪ್ಪು. ಪ್ರಕರಣ ರದ್ದುಪಡಿಸಲು ಪ್ರಾಸಿಕ್ಯೂಷನ್ ಆಕ್ಷೇಪಣೆ ಇಲ್ಲ’ ಎಂದರು.</p>.<p>ಈ ಮಾತಿಗೆ ನ್ಯಾಯಮೂರ್ತಿಗಳು, ‘ಪೊಲೀಸರು ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಏಕೆ ತಲೆ ಹಾಕುತ್ತಾರೆ, ಅವರೇನು ಸಿವಿಲ್ ಕೋರ್ಟ್ ಅಧಿಕಾರ ಹೊಂದಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಇಂತಹ ಪ್ರಕರಣ ಮರುಕಳಿಸಿದರೆ ಸಂಬಂಧಿಸಿದ ಅಧಿಕಾರಿಗಳನ್ನು ಕೋರ್ಟ್ ಸುಮ್ಮನೆ ಬಿಡುವುದಿಲ್ಲ’ ಎಂದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಿದ ನಗರದ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಇನ್ಸ್ಪೆಕ್ಟರ್ ಮಹೇಶ್, ‘ಇಂತಹ ಪ್ರಕರಣ ಮರುಕಳಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p><strong>ನ್ಯಾಯಮೂರ್ತಿ ಸಹಿ ನಕಲು: ದೂರು</strong><br /><strong>ಬೆಂಗಳೂರು:</strong> ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಸಹಿ ನಕಲು ಮಾಡಿದ ಆರೋಪದಲ್ಲಿ ಅಪರಿಚಿತರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಹೈಕೋರ್ಟ್ ಕ್ರಿಮಿನಲ್ ಶಾಖೆಯ ಡೆಪ್ಯೂಟಿ ರಿಜಿಸ್ಟ್ರಾರ್ ಅನಿತಾ ದೂರು ನೀಡಿದ್ದಾರೆ.</p>.<p>ಉತ್ತರ ಪ್ರದೇಶದ ವಿಕ್ಕಿ ಸಿಂಗ್ ಮತ್ತು ವಿಶಾಲ್ ಸಿಂಗ್ ಎಂಬುವರಿಗೆ ಸಂಬಂಧಿಸಿದ ಪತ್ರವೊಂದು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಕಚೇರಿಯಿಂದ ಜೂನ್ 11ರಂದು ಅನಿತಾ ಅವರಿಗೆ ಬಂದಿತ್ತು. ಆ ಪತ್ರದಲ್ಲಿ ಈ ಇಬ್ಬರ ಮೇಲೆ ಹಲವು ಮೊಕದ್ದಮೆಗಳಿರುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಅಲ್ಲದೆ, ಈ ಸಂಬಂಧ ಜಾಮೀನುರಹಿತ ವಾರೆಂಟ್ನ್ನು ಉತ್ತರ ಪ್ರದೇಶದ ಡಿಜಿ ಮೂಲಕ ಹೊರಡಿಸಿದ್ದು, ಇದನ್ನು ತಡೆಯಲು ಹೈಕೋರ್ಟ್ನ ಸಹಾಯಕ ರಿಜಿಸ್ಟ್ರಾರ್ (ಕ್ರಿಮಿನಲ್ ಶಾಖೆ) ಆದೇಶದಂತೆ ದಾಖಲೆಗಳನ್ನೂ ಸಲ್ಲಿಸಿರುವ ಬಗ್ಗೆ ಪ್ರಸ್ತಾಪಿಸಲಾಗಿತ್ತು.</p>.<p>ಇದನ್ನು ಪರಿಶೀಲಿಸಿದಾಗ ಸಹಾಯಕ ರಿಜಿಸ್ಟ್ರಾರ್ ಅವರು ಈ ರೀತಿಯ ಯಾವುದೇ ಆದೇಶ ಹೊರಡಿಸಿಲ್ಲ ಎನ್ನುವುದು ಗೊತ್ತಾಗಿತ್ತು. ಅಪರಿಚಿತರು ಸುಳ್ಳು ಆದೇಶವನ್ನು ಸೃಷ್ಟಿಸಿ ನ್ಯಾಯಮೂರ್ತಿಯ ಸಹಿ ನಕಲು ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ದೂರಿನಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪೊಲೀಸರು ಹಣ ವಸೂಲಿಗಾರರಂತೆ ವರ್ತಿಸಬಾರದು’ ಎಂದು ಹೈಕೋರ್ಟ್ ಕಿಡಿ ಕಾರಿದೆ.</p>.<p>ಸಿವಿಲ್ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಎಸ್.ಚಂದ್ರಮೌಳಿ, ‘ಇದೊಂದು ಸಿವಿಲ್ ವ್ಯಾಜ್ಯ. ಪೊಲೀಸರು ಈ ಪ್ರಕರಣದ ತನಿಖೆ ನಡೆಸಿರುವುದು ತಪ್ಪು. ಪ್ರಕರಣ ರದ್ದುಪಡಿಸಲು ಪ್ರಾಸಿಕ್ಯೂಷನ್ ಆಕ್ಷೇಪಣೆ ಇಲ್ಲ’ ಎಂದರು.</p>.<p>ಈ ಮಾತಿಗೆ ನ್ಯಾಯಮೂರ್ತಿಗಳು, ‘ಪೊಲೀಸರು ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಏಕೆ ತಲೆ ಹಾಕುತ್ತಾರೆ, ಅವರೇನು ಸಿವಿಲ್ ಕೋರ್ಟ್ ಅಧಿಕಾರ ಹೊಂದಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಇಂತಹ ಪ್ರಕರಣ ಮರುಕಳಿಸಿದರೆ ಸಂಬಂಧಿಸಿದ ಅಧಿಕಾರಿಗಳನ್ನು ಕೋರ್ಟ್ ಸುಮ್ಮನೆ ಬಿಡುವುದಿಲ್ಲ’ ಎಂದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಿದ ನಗರದ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಇನ್ಸ್ಪೆಕ್ಟರ್ ಮಹೇಶ್, ‘ಇಂತಹ ಪ್ರಕರಣ ಮರುಕಳಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p><strong>ನ್ಯಾಯಮೂರ್ತಿ ಸಹಿ ನಕಲು: ದೂರು</strong><br /><strong>ಬೆಂಗಳೂರು:</strong> ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಸಹಿ ನಕಲು ಮಾಡಿದ ಆರೋಪದಲ್ಲಿ ಅಪರಿಚಿತರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಹೈಕೋರ್ಟ್ ಕ್ರಿಮಿನಲ್ ಶಾಖೆಯ ಡೆಪ್ಯೂಟಿ ರಿಜಿಸ್ಟ್ರಾರ್ ಅನಿತಾ ದೂರು ನೀಡಿದ್ದಾರೆ.</p>.<p>ಉತ್ತರ ಪ್ರದೇಶದ ವಿಕ್ಕಿ ಸಿಂಗ್ ಮತ್ತು ವಿಶಾಲ್ ಸಿಂಗ್ ಎಂಬುವರಿಗೆ ಸಂಬಂಧಿಸಿದ ಪತ್ರವೊಂದು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಕಚೇರಿಯಿಂದ ಜೂನ್ 11ರಂದು ಅನಿತಾ ಅವರಿಗೆ ಬಂದಿತ್ತು. ಆ ಪತ್ರದಲ್ಲಿ ಈ ಇಬ್ಬರ ಮೇಲೆ ಹಲವು ಮೊಕದ್ದಮೆಗಳಿರುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಅಲ್ಲದೆ, ಈ ಸಂಬಂಧ ಜಾಮೀನುರಹಿತ ವಾರೆಂಟ್ನ್ನು ಉತ್ತರ ಪ್ರದೇಶದ ಡಿಜಿ ಮೂಲಕ ಹೊರಡಿಸಿದ್ದು, ಇದನ್ನು ತಡೆಯಲು ಹೈಕೋರ್ಟ್ನ ಸಹಾಯಕ ರಿಜಿಸ್ಟ್ರಾರ್ (ಕ್ರಿಮಿನಲ್ ಶಾಖೆ) ಆದೇಶದಂತೆ ದಾಖಲೆಗಳನ್ನೂ ಸಲ್ಲಿಸಿರುವ ಬಗ್ಗೆ ಪ್ರಸ್ತಾಪಿಸಲಾಗಿತ್ತು.</p>.<p>ಇದನ್ನು ಪರಿಶೀಲಿಸಿದಾಗ ಸಹಾಯಕ ರಿಜಿಸ್ಟ್ರಾರ್ ಅವರು ಈ ರೀತಿಯ ಯಾವುದೇ ಆದೇಶ ಹೊರಡಿಸಿಲ್ಲ ಎನ್ನುವುದು ಗೊತ್ತಾಗಿತ್ತು. ಅಪರಿಚಿತರು ಸುಳ್ಳು ಆದೇಶವನ್ನು ಸೃಷ್ಟಿಸಿ ನ್ಯಾಯಮೂರ್ತಿಯ ಸಹಿ ನಕಲು ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ದೂರಿನಲ್ಲಿ ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>