ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಟುಂಬಿಕ ಕಲಹ: ಠಾಣೆ ಮೆಟ್ಟಿಲೇರಿದ ನಿರ್ಮಾಪಕನ ಕುಟುಂಬ

Published 26 ಜೂನ್ 2023, 19:55 IST
Last Updated 26 ಜೂನ್ 2023, 19:55 IST
ಅಕ್ಷರ ಗಾತ್ರ

ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ ಸಿನಿಮಾ ನಿರ್ಮಾಪಕ ಟಿ.ಚಂದ್ರಶೇಖರ್ ಹಾಗೂ ಅವರ ಪತ್ನಿ, ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಮೆಟ್ಟಿಲೇರಿದ್ದಾರೆ. ಇಬ್ಬರೂ ಪ್ರತ್ಯೇಕ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ

‘ಡ್ರಗ್ಸ್ ವ್ಯಸನಿಯಾಗಿರುವ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾರೆ. ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆ’ ಎಂದು ಸಿನಿಮಾ ನಿರ್ಮಾಪಕ ಟಿ.ಚಂದ್ರಶೇಖರ್ ದೂರು ನೀಡಿದ್ದಾರೆ.

ಪ್ರತಿ ದೂರು ನೀಡಿರುವ ಪತ್ನಿ, ‘ನನ್ನ ಮೇಲೆ ಪತಿ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಡ್ರಗ್ಸ್ ಇಟ್ಟು ಜೈಲಿಗೆ ಕಳುಹಿಸುವುದಾಗಿ ಬೆದರಿಸಿದ್ದಾರೆ. ನನ್ನ ಸ್ನೇಹಿತನಿಗೂ ಹೊಡೆದು ಕೊಲೆ ಮಾಡುವುದಾಗಿ ಹೆದರಿಸಿದ್ದಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT