<p><strong>ಬೆಂಗಳೂರು:</strong> ಕಣ್ವ ಸಮೂಹ ಸಂಸ್ಥೆಯ ಕಣ್ವ ಸೌಹಾರ್ದ ಕೋ–ಆಪರೇಟಿವ್ ಸೊಸೈಟಿ, ಹೂಡಿಕೆದಾರರು ಹಾಗೂ ಷೇರುದಾರರಿಗೆ ಹಣ ವಾಪಸ್ ನೀಡುವ ಭರವಸೆ ನೀಡಿದ್ದು, ಬ್ಯಾಂಕ್ ಗ್ರಾಹಕರು ಕ್ಲೇಂ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.</p>.<p>ಬ್ಯಾಂಕ್ ಎದುರು ಕಳೆದ 15 ದಿನಗಳಿಂದಲೂ ಗ್ರಾಹಕರು ಕಾಣಿಸಿಕೊಳ್ಳುತ್ತಿದ್ದಾರೆ. ಬುಧವಾರವೂ ಗ್ರಾಹಕರ ಸರದಿ ಕಂಡುಬಂತು.</p>.<p>‘ಇದೊಂದು ಸುಳ್ಳು ಭರವಸೆ ಅಷ್ಟೆ’ ಎಂದು ಗುರು ರಾಘವೇಂದ್ರ ಕೋ–ಆಪರೇಟಿವ್ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆ ಮಹಾಪೋಷಕ ಶಂಕರ್ ಗುಹಾ ದ್ವಾರಕಾನಾಥ್ ಬೆಳ್ಳೂರು ತಿಳಿಸಿದ್ದಾರೆ.</p>.<p>ವಂಚನೆ ಪ್ರಕರಣದ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನೂರಾರು ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿತ್ತು. ವಂಚನೆ ಸಂಬಂಧ ದೂರು ಆಧರಿಸಿ ಬ್ಯಾಂಕ್ನ ಹಲವರನ್ನು ಪೊಲೀಸರು ಬಂಧಿಸಿದ್ದರು.</p>.<p>ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಸೇರಿ ಕೆಲವು ಸಹಕಾರ ಬ್ಯಾಂಕ್ಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಈ ಬ್ಯಾಂಕ್ಗಳ ಷೇರುದಾರರಿಗೆ ನ್ಯಾಯ ಕಲ್ಪಿಸಲು ಆಗ್ರಹಿಸಿ ದೆಹಲಿ ಹಾಗೂ ನಗರದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಸಿಬಿಐ ತನಿಖೆಗೂ ಆಗ್ರಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಣ್ವ ಸಮೂಹ ಸಂಸ್ಥೆಯ ಕಣ್ವ ಸೌಹಾರ್ದ ಕೋ–ಆಪರೇಟಿವ್ ಸೊಸೈಟಿ, ಹೂಡಿಕೆದಾರರು ಹಾಗೂ ಷೇರುದಾರರಿಗೆ ಹಣ ವಾಪಸ್ ನೀಡುವ ಭರವಸೆ ನೀಡಿದ್ದು, ಬ್ಯಾಂಕ್ ಗ್ರಾಹಕರು ಕ್ಲೇಂ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.</p>.<p>ಬ್ಯಾಂಕ್ ಎದುರು ಕಳೆದ 15 ದಿನಗಳಿಂದಲೂ ಗ್ರಾಹಕರು ಕಾಣಿಸಿಕೊಳ್ಳುತ್ತಿದ್ದಾರೆ. ಬುಧವಾರವೂ ಗ್ರಾಹಕರ ಸರದಿ ಕಂಡುಬಂತು.</p>.<p>‘ಇದೊಂದು ಸುಳ್ಳು ಭರವಸೆ ಅಷ್ಟೆ’ ಎಂದು ಗುರು ರಾಘವೇಂದ್ರ ಕೋ–ಆಪರೇಟಿವ್ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣಾ ವೇದಿಕೆ ಮಹಾಪೋಷಕ ಶಂಕರ್ ಗುಹಾ ದ್ವಾರಕಾನಾಥ್ ಬೆಳ್ಳೂರು ತಿಳಿಸಿದ್ದಾರೆ.</p>.<p>ವಂಚನೆ ಪ್ರಕರಣದ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನೂರಾರು ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿತ್ತು. ವಂಚನೆ ಸಂಬಂಧ ದೂರು ಆಧರಿಸಿ ಬ್ಯಾಂಕ್ನ ಹಲವರನ್ನು ಪೊಲೀಸರು ಬಂಧಿಸಿದ್ದರು.</p>.<p>ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಸೇರಿ ಕೆಲವು ಸಹಕಾರ ಬ್ಯಾಂಕ್ಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಈ ಬ್ಯಾಂಕ್ಗಳ ಷೇರುದಾರರಿಗೆ ನ್ಯಾಯ ಕಲ್ಪಿಸಲು ಆಗ್ರಹಿಸಿ ದೆಹಲಿ ಹಾಗೂ ನಗರದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಸಿಬಿಐ ತನಿಖೆಗೂ ಆಗ್ರಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>