ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್)ನೀಡಲಾಗಿದೆ.
ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ.
ಹೈಕೋರ್ಟ್ ನೇಮಿಸುವ ‘ಕ್ಲೇಮ್ ಕಮಿಷನರ್’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. ದಾವೆ ನಡೆಸುವ ಮತ್ತು ಅಫಿಡವಿಟ್ಗೆ ಸಹಿ ಹಾಕುವ ಅಧಿಕಾರವನ್ನು ಎಡಿಜಿಪಿಗೆ ನೀಡಲಾಗಿದೆ.