<p><strong>ಬೆಂಗಳೂರು:</strong> ‘ಡಿ.ಜೆ.ಹಳ್ಳಿ ಹಿಂಸಾಚಾರದಲ್ಲಿನ ಹಾನಿಯ ಹೊಣೆ ನಿಗದಿ ಮಾಡಲು ನೇಮಕಗೊಂಡಿರುವ ಕ್ಲೇಮ್ ಕಮಿಷನರ್ ಅವರ ಕಾರ್ಯವೈಖರಿ ಜ.18ರಿಂದ ಪರಿಣಾಮಕಾರಿಯಾಗಿ ಆರಂಭವಾಗುವಂತೆ ನೋಡಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಕ್ಲೇಮ್ ಕಮಿಷನರ್ ಆಗಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ಅಗತ್ಯ ಇರುವ ಎಲ್ಲ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿತು.</p>.<p>‘ಮೂಲಸೌಕರ್ಯಗಳ ಬಗ್ಗೆ ನೋಡಲ್ ಅಧಿಕಾರಿಯಾಗಲಿ ಅಥವಾ ಬೇರೆ ಯಾವ ಅಧಿಕಾರಿಯೂ ನನಗೆ ಮಾಹಿತಿ ನೀಡಿಲ್ಲ’ ಎಂದು ನ್ಯಾಯಮೂರ್ತಿ ಕೆಂಪಣ್ಣ ಅವರು ಸಲ್ಲಿಸಿದ್ದ ವರದಿಯನ್ನು ಪೀಠ ಪರಿಶೀಲನೆ ನಡೆಸಿತು.</p>.<p>‘2020ರ ಅಕ್ಟೋಬರ್ 1ರಂದು ಕೆಂಪಣ್ಣ ಅವರನ್ನು ಹೈಕೋರ್ಟ್ ನೇಮಕ ಮಾಡಿದೆ. ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿಯೊಬ್ಬರು ಪತ್ರ ಬರೆಯಬೇಕಾದ ಸಂದರ್ಭ ಬಂದಿರುವುದು ದುರದೃಷ್ಟಕರ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಈ ಸಂಬಂಧ ಹೈಕೋರ್ಟ್ ಹಲವು ಬಾರಿ ನಿರ್ದೇಶನ ನೀಡಿದ್ದರೂ, ಸರ್ಕಾರ ಪಾಲಿಸದೇ ಇರುವುದು ಶೋಚನೀಯ’ ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಡಿ.ಜೆ.ಹಳ್ಳಿ ಹಿಂಸಾಚಾರದಲ್ಲಿನ ಹಾನಿಯ ಹೊಣೆ ನಿಗದಿ ಮಾಡಲು ನೇಮಕಗೊಂಡಿರುವ ಕ್ಲೇಮ್ ಕಮಿಷನರ್ ಅವರ ಕಾರ್ಯವೈಖರಿ ಜ.18ರಿಂದ ಪರಿಣಾಮಕಾರಿಯಾಗಿ ಆರಂಭವಾಗುವಂತೆ ನೋಡಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಕ್ಲೇಮ್ ಕಮಿಷನರ್ ಆಗಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ಅಗತ್ಯ ಇರುವ ಎಲ್ಲ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿತು.</p>.<p>‘ಮೂಲಸೌಕರ್ಯಗಳ ಬಗ್ಗೆ ನೋಡಲ್ ಅಧಿಕಾರಿಯಾಗಲಿ ಅಥವಾ ಬೇರೆ ಯಾವ ಅಧಿಕಾರಿಯೂ ನನಗೆ ಮಾಹಿತಿ ನೀಡಿಲ್ಲ’ ಎಂದು ನ್ಯಾಯಮೂರ್ತಿ ಕೆಂಪಣ್ಣ ಅವರು ಸಲ್ಲಿಸಿದ್ದ ವರದಿಯನ್ನು ಪೀಠ ಪರಿಶೀಲನೆ ನಡೆಸಿತು.</p>.<p>‘2020ರ ಅಕ್ಟೋಬರ್ 1ರಂದು ಕೆಂಪಣ್ಣ ಅವರನ್ನು ಹೈಕೋರ್ಟ್ ನೇಮಕ ಮಾಡಿದೆ. ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿಯೊಬ್ಬರು ಪತ್ರ ಬರೆಯಬೇಕಾದ ಸಂದರ್ಭ ಬಂದಿರುವುದು ದುರದೃಷ್ಟಕರ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಈ ಸಂಬಂಧ ಹೈಕೋರ್ಟ್ ಹಲವು ಬಾರಿ ನಿರ್ದೇಶನ ನೀಡಿದ್ದರೂ, ಸರ್ಕಾರ ಪಾಲಿಸದೇ ಇರುವುದು ಶೋಚನೀಯ’ ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>