ಭಾನುವಾರ ಮಧ್ಯಾಹ್ನ ಅಂಜನಾಪುರ 5ನೇ ಕ್ರಾಸ್ನ ಮೂರನೇ ಮುಖ್ಯರಸ್ತೆಯ ಲಾಲ್ ಬಹದ್ದೂರ್ ಶಾಸ್ತ್ರಿ ನಗರದ ನಿರ್ಜನ ಪ್ರದೇಶದಲ್ಲಿ ಸ್ನೇಹಿತರಾದ ಸುಹಾಸ್, ಚಂದ್ರಮೂರ್ತಿ, ನವೀನ್ ಮತ್ತು ಮೋಹನ್ ಪಾರ್ಟಿ ಮಾಡಿದ್ದಾರೆ. ಮದ್ಯಸೇವನೆ ವೇಳೆ ಸುಹಾಸ್, ನವೀನ್
ನನ್ನು ಕೆಲಸದಿಂದ ತೆಗೆದು ಹಾಕಿದ್ದ ವಿಷಯ ಪ್ರಸ್ತಾಪಿಸಿದ್ದ. ಈ ವಿಚಾರಕ್ಕೆ ನವೀನ್, ಚಂದ್ರಮೂರ್ತಿ ಹಾಗೂ ಸುಹಾಸ್ ಮಧ್ಯೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಅಲ್ಲಿಯೇ ಇದ್ದ ದೊಣ್ಣೆಯಿಂದ ಮೂವರೂ ಹೊಡೆದಾಡಿಕೊಂಡಿದ್ದಾರೆ. ಈ ವೇಳೆಗೆ ಸುಹಾಸ್ಗೆ ಬಲವಾದ ಪೆಟ್ಟು ಬಿದ್ದಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.