<p><strong>ಬೆಂಗಳೂರು:</strong> ವಿಧಾನಸಭೆ ಕ್ಷೇತ್ರಗಳಲ್ಲಿ ಉತ್ತಮವಾಗಿ ಸ್ವಚ್ಛತಾ ಕಾರ್ಯ ನಡೆಸಲು, ನಗರ ಪಾಲಿಕೆಗಳ ಅಧಿಕಾರಿಗಳನ್ನು ಉತ್ತೇಜಿಸಲು ಸ್ಪರ್ಧೆ ಆಯೋಜಿಸಲಾಗಿದ್ದು, ಮೊದಲ ಬಹುಮಾನವಾಗಿ ₹1 ಲಕ್ಷ ಬಹುಮಾನ ನೀಡಲಾಗುತ್ತದೆ.</p>.<p>ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯದಂತೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ‘ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ. ಉತ್ತಮವಾಗಿ ಕೆಲಸ ಮಾಡಿದವರನ್ನು ಗೌರವಿಸಲಾಗುತ್ತದೆ ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಹೇಳಿದರು.</p>.<p>ಉತ್ತರ ನಗರ ಪಾಲಿಕೆಯ ಹೆಬ್ಬಾಳ, ಪುಲಿಕೇಶಿನಗರ, ಸರ್ವಜ್ಞನಗರ, ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳ ಒಟ್ಟು 93.9 ಕಿ.ಮೀ ರಸ್ತೆಗಳಲ್ಲಿ ತ್ಯಾಜ್ಯ, ಸಿಲ್ಟ್, ಕಟ್ಟಡ ತ್ಯಾಜ್ಯ ಹಾಗೂ ಮರದ ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ ಜೊತೆಗೆ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ನ.8ರಿಂದ ಕೈಗೊಳ್ಳಲಾಗುವುದು.</p>.<p>ಈ ಮಹಾ ಸ್ವಚ್ಛತಾ ಅಭಿಯಾನದಲ್ಲಿ ಪಾಲಿಕೆಯ ಘನತ್ಯಾಜ್ಯ, ಎಂಜಿನಿಯರಿಂಗ್ , ರಸ್ತೆ ಮೂಲಸೌಕರ್ಯ, ಆರೋಗ್ಯ ವಿಭಾಗ, ಸಂಚಾರ ಪೋಲಿಸ್, ತೋಟಗಾರಿಕೆ ವಿಭಾಗ, ಅರಣ್ಯ ವಿಭಾಗ, ಕೆರೆಗಳ ನಿರ್ವಹಣೆ ವಿಭಾಗ ಸೇರಿದಂತೆ ಇತರೆ ಇಲಾಖೆಗಳು ಹಾಗೂ ಸ್ಥಳೀಯ ಸಂಘಟನೆಗಳು ಪಾಲ್ಗೊಳ್ಳಲಿವೆ.</p>.<p>ಪಾಲಿಕೆ ಅಧಿಕಾರಿಗಳನ್ನು ಗುರುತಿಸಿ ಉತ್ತೇಜಿಸುವ ನಿಟ್ಟಿನಲ್ಲಿ ಹಾಗೂ ಉತ್ತಮವಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಮೊದಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಗರ ಪಾಲಿಕೆಯ ವತಿಯಿಂದ ಬಹುಮಾನಗಳನ್ನು ನೀಡಲಾಗುವುದು. ಉತ್ತಮವಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ ವಿಧಾನಸಭಾ ಕ್ಷೇತ್ರಗಳನ್ನು ಎನ್ಜಿಒ / ಸಂಘ ಸಂಸ್ಥೆಗಳ ಮೂಲಕ ತಪಾಸಣೆ ಮಾಡಿಸಿ ಆಯ್ಕೆ ಮಾಡಲಾಗುವುದು ಎಂದು ಪೊಮ್ಮಲ ಸುನೀಲ್ ಕುಮಾರ್ ಮಾಹಿತಿ ನೀಡಿದರು.</p>.<p>ಮೊದಲ ಬಹುಮಾನ – ₹1 ಲಕ್ಷ, ಎರಡನೇ ಬಹುಮಾನ – ₹50 ಸಾವಿರ, ಮೂರನೇ ಬಹುಮಾನ – ₹25 ಸಾವಿರ ಇರುತ್ತದೆ. ಅಲ್ಲದೆ, ವಿಭಾಗವಾರು ಪ್ರತ್ಯೇಕ ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.</p>.<p>ನಗರದ ಸ್ವಚ್ಛತೆ ಕಾಪಾಡಲು ಪಾಲಿಕೆಯ ಸಿಬ್ಬಂದಿ ಪ್ರತಿದಿನ ಶ್ರಮಿಸುತ್ತಿದ್ದಾರೆ. ಉತ್ತಮವಾದ ಪರಿಸರವನ್ನು ನಿರ್ಮಿಸಲು ಹಾಗೂ ನಾಗರಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪಾಲಿಕೆಯು ಅನೇಕ ಕಾರ್ಯಕ್ರಮಗಳ ಮೂಲಕ ಹೆಜ್ಜೆ ಇರಿಸಿದೆ. ಈ ಪ್ರಯತ್ನದಲ್ಲಿ ನಾಗರಿಕರ ಸಹಭಾಗಿತ್ವ ಹಾಗೂ ಪ್ರೋತ್ಸಾಹ ಅಗತ್ಯವಿದೆ. ಸಾರ್ವಜನಿಕ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ನಿವಾರಿಸಲು ಜನರು ಕೈಜೋಡಿಸಬೇಕು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆ ಕ್ಷೇತ್ರಗಳಲ್ಲಿ ಉತ್ತಮವಾಗಿ ಸ್ವಚ್ಛತಾ ಕಾರ್ಯ ನಡೆಸಲು, ನಗರ ಪಾಲಿಕೆಗಳ ಅಧಿಕಾರಿಗಳನ್ನು ಉತ್ತೇಜಿಸಲು ಸ್ಪರ್ಧೆ ಆಯೋಜಿಸಲಾಗಿದ್ದು, ಮೊದಲ ಬಹುಮಾನವಾಗಿ ₹1 ಲಕ್ಷ ಬಹುಮಾನ ನೀಡಲಾಗುತ್ತದೆ.</p>.<p>ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯದಂತೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ‘ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ. ಉತ್ತಮವಾಗಿ ಕೆಲಸ ಮಾಡಿದವರನ್ನು ಗೌರವಿಸಲಾಗುತ್ತದೆ ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಹೇಳಿದರು.</p>.<p>ಉತ್ತರ ನಗರ ಪಾಲಿಕೆಯ ಹೆಬ್ಬಾಳ, ಪುಲಿಕೇಶಿನಗರ, ಸರ್ವಜ್ಞನಗರ, ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳ ಒಟ್ಟು 93.9 ಕಿ.ಮೀ ರಸ್ತೆಗಳಲ್ಲಿ ತ್ಯಾಜ್ಯ, ಸಿಲ್ಟ್, ಕಟ್ಟಡ ತ್ಯಾಜ್ಯ ಹಾಗೂ ಮರದ ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ ಜೊತೆಗೆ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ನ.8ರಿಂದ ಕೈಗೊಳ್ಳಲಾಗುವುದು.</p>.<p>ಈ ಮಹಾ ಸ್ವಚ್ಛತಾ ಅಭಿಯಾನದಲ್ಲಿ ಪಾಲಿಕೆಯ ಘನತ್ಯಾಜ್ಯ, ಎಂಜಿನಿಯರಿಂಗ್ , ರಸ್ತೆ ಮೂಲಸೌಕರ್ಯ, ಆರೋಗ್ಯ ವಿಭಾಗ, ಸಂಚಾರ ಪೋಲಿಸ್, ತೋಟಗಾರಿಕೆ ವಿಭಾಗ, ಅರಣ್ಯ ವಿಭಾಗ, ಕೆರೆಗಳ ನಿರ್ವಹಣೆ ವಿಭಾಗ ಸೇರಿದಂತೆ ಇತರೆ ಇಲಾಖೆಗಳು ಹಾಗೂ ಸ್ಥಳೀಯ ಸಂಘಟನೆಗಳು ಪಾಲ್ಗೊಳ್ಳಲಿವೆ.</p>.<p>ಪಾಲಿಕೆ ಅಧಿಕಾರಿಗಳನ್ನು ಗುರುತಿಸಿ ಉತ್ತೇಜಿಸುವ ನಿಟ್ಟಿನಲ್ಲಿ ಹಾಗೂ ಉತ್ತಮವಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಮೊದಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಗರ ಪಾಲಿಕೆಯ ವತಿಯಿಂದ ಬಹುಮಾನಗಳನ್ನು ನೀಡಲಾಗುವುದು. ಉತ್ತಮವಾಗಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ ವಿಧಾನಸಭಾ ಕ್ಷೇತ್ರಗಳನ್ನು ಎನ್ಜಿಒ / ಸಂಘ ಸಂಸ್ಥೆಗಳ ಮೂಲಕ ತಪಾಸಣೆ ಮಾಡಿಸಿ ಆಯ್ಕೆ ಮಾಡಲಾಗುವುದು ಎಂದು ಪೊಮ್ಮಲ ಸುನೀಲ್ ಕುಮಾರ್ ಮಾಹಿತಿ ನೀಡಿದರು.</p>.<p>ಮೊದಲ ಬಹುಮಾನ – ₹1 ಲಕ್ಷ, ಎರಡನೇ ಬಹುಮಾನ – ₹50 ಸಾವಿರ, ಮೂರನೇ ಬಹುಮಾನ – ₹25 ಸಾವಿರ ಇರುತ್ತದೆ. ಅಲ್ಲದೆ, ವಿಭಾಗವಾರು ಪ್ರತ್ಯೇಕ ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.</p>.<p>ನಗರದ ಸ್ವಚ್ಛತೆ ಕಾಪಾಡಲು ಪಾಲಿಕೆಯ ಸಿಬ್ಬಂದಿ ಪ್ರತಿದಿನ ಶ್ರಮಿಸುತ್ತಿದ್ದಾರೆ. ಉತ್ತಮವಾದ ಪರಿಸರವನ್ನು ನಿರ್ಮಿಸಲು ಹಾಗೂ ನಾಗರಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪಾಲಿಕೆಯು ಅನೇಕ ಕಾರ್ಯಕ್ರಮಗಳ ಮೂಲಕ ಹೆಜ್ಜೆ ಇರಿಸಿದೆ. ಈ ಪ್ರಯತ್ನದಲ್ಲಿ ನಾಗರಿಕರ ಸಹಭಾಗಿತ್ವ ಹಾಗೂ ಪ್ರೋತ್ಸಾಹ ಅಗತ್ಯವಿದೆ. ಸಾರ್ವಜನಿಕ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ನಿವಾರಿಸಲು ಜನರು ಕೈಜೋಡಿಸಬೇಕು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>