ಏನಿದು ಅರ್ಜಿ?: ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಬರುವ ಪ್ರವಾಸಿಗರಿಂದ ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ (ಗುಪ್ತ ಗಾಮಿನಿ) ನದಿಗಳು ಮಲಿನವಾಗುತ್ತಿವೆ. ಕಾವೇರಿ ನದಿಗೆ ಅಡ್ಡಲಾಗಿ ಭಾಗಮಂಡಲದ ಬಳಿ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳನ್ನು ಸಂಪರ್ಕ ಕಲ್ಪಿಸಲು ₹ 28.08 ಕೋಟಿ ವೆಚ್ಚದಲ್ಲಿ ಮೆಲ್ಸೇತುವೆ ನಿರ್ಮಿಸಲು ಸರ್ಕಾರ 2017ರ ಆಗಸ್ಟ್ 28ರಂದು ಕರೆದಿರುವ ಟೆಂಡರ್ ಅನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.