<p><strong>ಪೀಣ್ಯ ದಾಸರಹಳ್ಳಿ:</strong> ಹೆಸರುಘಟ್ಟ ಮುಖ್ಯರಸ್ತೆಯಲ್ಲಿರುವ ಆತ್ಮೀಯ ಗೆಳೆಯರ ಬಳಗ ಬಡಾವಣೆಯಲ್ಲಿ ಬಿಬಿಎಂಪಿ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ನಲ್ಲಿ ರಸ್ತೆ ಬದಿಯ ಅಂಗಡಿ ಹಾಗೂ ಪಾದಚಾರಿ ಮಾರ್ಗದ ಒತ್ತುವರಿಯನ್ನು ತೆರವುಗೊಳಿಸಿದರು.</p>.<p>ದಾಸರಹಳ್ಳಿ ವಲಯ ಆಯುಕ್ತ ನವೀನ್ ಕುಮಾರ್ ಅವರ ಆದೇಶದ ಮೇರೆಗೆ ಸಹಾಯಕ ಎಂಜಿನಿಯರ್ ಮಂಜೇಗೌಡ ನೇತೃತ್ವದಲ್ಲಿ ಬಿಬಿಎಂಪಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>ತೆರವುಗೊಳಿಸಿದ ರಸ್ತೆ ಬದಿಯ ಅಂಗಡಿಗಳು, ನಾಮಫಲಕ ಇತ್ಯಾದಿಗಳನ್ನು ಬಿಬಿಎಂಪಿ ಸಿಬ್ಬಂದಿ ಐದಾರು ಟ್ರಾಕ್ಟರ್ಗಳಲ್ಲಿ ತುಂಬಿಕೊಂಡರು. ಪಾದಚಾರಿ ಮಾರ್ಗದಲ್ಲಿದ್ದ ಗೋಡೆಗಳನ್ನು ತೆರವುಗೊಳಿಸಿದರು.</p>.<p>'ಮೊದಲೇ ಹೇಳಿದ್ದರೆ ನಾವೇ ತೆಗೆಯುತ್ತಿದ್ದೆವು. ಸಾಲ ಮಾಡಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದೇವೆ. ನಮ್ಮ ಹೊಟ್ಟೆ ಮೇಲೆ ಹೊಡೆಯುವ ಕೆಲಸವನ್ನು ಬಿಬಿಎಂಪಿ ಮಾಡಿದೆ’ ಎಂದು ಅಂಗಡಿಯವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಚಿಕ್ಕಬಾಣಾವರ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ಕೇಶವಮೂರ್ತಿ ಎನ್.ಎನ್, ಪಿಎಸ್ಐ ಅಶ್ವತ್ಥಯ್ಯ, ಎಎಸ್ಐ ವೆಂಕಟೇಶ ಮೂರ್ತಿ, ಎಚ್. ಸಿ ಮಂಜುನಾಥ್, ಸಂಜೀವ್, ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಧನಂಜಯ್, ವಿಜಯ್ ಕುಮಾರ್, ಮಾಳಪ್ಪ ಕಾರ್ಯಾಚರಣೆ ವೇಳೆ ಬಂದೋಬಸ್ತ್ನಲ್ಲಿದ್ದರು.</p>.<p>ಬಿಬಿಎಂಪಿ ಅಧಿಕಾರಿಗಳಾದ ಮಂಜೇಗೌಡ, ತನಯ್ ಕುಮಾರ್, ಜೆ.ಎಚ್.ಐ ಸುರೇಶ್, ರಘುನಾಥ್ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಹೆಸರುಘಟ್ಟ ಮುಖ್ಯರಸ್ತೆಯಲ್ಲಿರುವ ಆತ್ಮೀಯ ಗೆಳೆಯರ ಬಳಗ ಬಡಾವಣೆಯಲ್ಲಿ ಬಿಬಿಎಂಪಿ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ನಲ್ಲಿ ರಸ್ತೆ ಬದಿಯ ಅಂಗಡಿ ಹಾಗೂ ಪಾದಚಾರಿ ಮಾರ್ಗದ ಒತ್ತುವರಿಯನ್ನು ತೆರವುಗೊಳಿಸಿದರು.</p>.<p>ದಾಸರಹಳ್ಳಿ ವಲಯ ಆಯುಕ್ತ ನವೀನ್ ಕುಮಾರ್ ಅವರ ಆದೇಶದ ಮೇರೆಗೆ ಸಹಾಯಕ ಎಂಜಿನಿಯರ್ ಮಂಜೇಗೌಡ ನೇತೃತ್ವದಲ್ಲಿ ಬಿಬಿಎಂಪಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>ತೆರವುಗೊಳಿಸಿದ ರಸ್ತೆ ಬದಿಯ ಅಂಗಡಿಗಳು, ನಾಮಫಲಕ ಇತ್ಯಾದಿಗಳನ್ನು ಬಿಬಿಎಂಪಿ ಸಿಬ್ಬಂದಿ ಐದಾರು ಟ್ರಾಕ್ಟರ್ಗಳಲ್ಲಿ ತುಂಬಿಕೊಂಡರು. ಪಾದಚಾರಿ ಮಾರ್ಗದಲ್ಲಿದ್ದ ಗೋಡೆಗಳನ್ನು ತೆರವುಗೊಳಿಸಿದರು.</p>.<p>'ಮೊದಲೇ ಹೇಳಿದ್ದರೆ ನಾವೇ ತೆಗೆಯುತ್ತಿದ್ದೆವು. ಸಾಲ ಮಾಡಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದೇವೆ. ನಮ್ಮ ಹೊಟ್ಟೆ ಮೇಲೆ ಹೊಡೆಯುವ ಕೆಲಸವನ್ನು ಬಿಬಿಎಂಪಿ ಮಾಡಿದೆ’ ಎಂದು ಅಂಗಡಿಯವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಚಿಕ್ಕಬಾಣಾವರ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ಕೇಶವಮೂರ್ತಿ ಎನ್.ಎನ್, ಪಿಎಸ್ಐ ಅಶ್ವತ್ಥಯ್ಯ, ಎಎಸ್ಐ ವೆಂಕಟೇಶ ಮೂರ್ತಿ, ಎಚ್. ಸಿ ಮಂಜುನಾಥ್, ಸಂಜೀವ್, ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಧನಂಜಯ್, ವಿಜಯ್ ಕುಮಾರ್, ಮಾಳಪ್ಪ ಕಾರ್ಯಾಚರಣೆ ವೇಳೆ ಬಂದೋಬಸ್ತ್ನಲ್ಲಿದ್ದರು.</p>.<p>ಬಿಬಿಎಂಪಿ ಅಧಿಕಾರಿಗಳಾದ ಮಂಜೇಗೌಡ, ತನಯ್ ಕುಮಾರ್, ಜೆ.ಎಚ್.ಐ ಸುರೇಶ್, ರಘುನಾಥ್ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>