<p><strong>ಬೆಂಗಳೂರು</strong>: ರಾಜರಾಜೇಶ್ವರಿ ನಗರ ವಲಯದ ಹಲವು ಪ್ರದೇಶಗಳಲ್ಲಿ ಪಾದಚಾರಿ ಮಾರ್ಗದಲ್ಲಿರುವ ಒತ್ತುವರಿಯನ್ನು ಜುಲೈ 11ರಂದು ತೆರವು ಮಾಡಲಾಗುತ್ತದೆ ಎಂದು ಬಿಬಿಎಂಪಿ ವಲಯ ಆಯುಕ್ತ ಬಿ.ಸಿ. ಸತೀಶ್ ತಿಳಿಸಿದರು.</p>.<p>ಮುಖ್ಯ ಆಯುಕ್ತರ ನಿರ್ದೇಶನದಂತೆ ಪಾದಚಾರಿಗಳಿಗೆ ಅಡೆತಡೆಗಳಿಲ್ಲದ ಪಾದಚಾರಿ ಮಾರ್ಗವನ್ನು ಕಲ್ಪಿಸಲಾಗುತ್ತಿದೆ. ಹೀಗಾಗಿ, ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರತಿ ತಿಂಗಳ ಒಂದನೇ ಮತ್ತು ಮೂರನೇ ಶನಿವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶುಕ್ರವಾರದಂದು ನಡೆಸಲಾಗುತ್ತದೆ ಎಂದರು.</p>.<p>ರಾಜರಾಜೇಶ್ವರಿನಗರ ವಿಭಾಗದ ಬಿಇಎಂಎಲ್ ಕಾಂಪ್ಲೆಕ್ಸ್ನಿಂದ ಬಿಎಂಟಿಸಿ ಬಸ್ ಡಿಪೋವರೆಗಿನ ಮುಖ್ಯರಸ್ತೆ ಹಾಗೂ ಕೆಂಗೇರಿ ವಿಭಾಗದ ದೀಪಾ ಕಾಂಪ್ಲೆಕ್ಸ್ನಿಂದ ಮುದ್ದಿನಪಾಳ್ಯ ವೃತ್ತದವರೆಗಿನ ಮುಖ್ಯರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿಯನ್ನು ಶುಕ್ರವಾರ ತೆರವು ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ಒತ್ತುವರಿ ಮಾಡಿಕೊಂಡಿರುವ ಅಂಗಡಿಯವರು, ಬೀದಿಬದಿ ವ್ಯಾಪಾರಿಗಳು ಹಾಗೂ ಇನ್ನಿತರ ಒತ್ತುವರಿದಾರರು ಪಾದಚಾರಿ ಮಾರ್ಗವನ್ನು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ, ಬಿಬಿಎಂಪಿ ವತಿಯಿಂದ ಒತ್ತುವರಿ ತೆರವುಗೊಳಿಸಿ, ನಿಯಮಾನುಸಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜರಾಜೇಶ್ವರಿ ನಗರ ವಲಯದ ಹಲವು ಪ್ರದೇಶಗಳಲ್ಲಿ ಪಾದಚಾರಿ ಮಾರ್ಗದಲ್ಲಿರುವ ಒತ್ತುವರಿಯನ್ನು ಜುಲೈ 11ರಂದು ತೆರವು ಮಾಡಲಾಗುತ್ತದೆ ಎಂದು ಬಿಬಿಎಂಪಿ ವಲಯ ಆಯುಕ್ತ ಬಿ.ಸಿ. ಸತೀಶ್ ತಿಳಿಸಿದರು.</p>.<p>ಮುಖ್ಯ ಆಯುಕ್ತರ ನಿರ್ದೇಶನದಂತೆ ಪಾದಚಾರಿಗಳಿಗೆ ಅಡೆತಡೆಗಳಿಲ್ಲದ ಪಾದಚಾರಿ ಮಾರ್ಗವನ್ನು ಕಲ್ಪಿಸಲಾಗುತ್ತಿದೆ. ಹೀಗಾಗಿ, ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರತಿ ತಿಂಗಳ ಒಂದನೇ ಮತ್ತು ಮೂರನೇ ಶನಿವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶುಕ್ರವಾರದಂದು ನಡೆಸಲಾಗುತ್ತದೆ ಎಂದರು.</p>.<p>ರಾಜರಾಜೇಶ್ವರಿನಗರ ವಿಭಾಗದ ಬಿಇಎಂಎಲ್ ಕಾಂಪ್ಲೆಕ್ಸ್ನಿಂದ ಬಿಎಂಟಿಸಿ ಬಸ್ ಡಿಪೋವರೆಗಿನ ಮುಖ್ಯರಸ್ತೆ ಹಾಗೂ ಕೆಂಗೇರಿ ವಿಭಾಗದ ದೀಪಾ ಕಾಂಪ್ಲೆಕ್ಸ್ನಿಂದ ಮುದ್ದಿನಪಾಳ್ಯ ವೃತ್ತದವರೆಗಿನ ಮುಖ್ಯರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿಯನ್ನು ಶುಕ್ರವಾರ ತೆರವು ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>ಒತ್ತುವರಿ ಮಾಡಿಕೊಂಡಿರುವ ಅಂಗಡಿಯವರು, ಬೀದಿಬದಿ ವ್ಯಾಪಾರಿಗಳು ಹಾಗೂ ಇನ್ನಿತರ ಒತ್ತುವರಿದಾರರು ಪಾದಚಾರಿ ಮಾರ್ಗವನ್ನು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ, ಬಿಬಿಎಂಪಿ ವತಿಯಿಂದ ಒತ್ತುವರಿ ತೆರವುಗೊಳಿಸಿ, ನಿಯಮಾನುಸಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>