<p><strong>ಬೆಂಗಳೂರು:</strong> ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರಚಿಕಿತ್ಸೆ ಸಾಮರ್ಥ್ಯ ಹೆಚ್ಚಿಸಲು ರಾಜ್ಯ ಸರ್ಕಾರವು ‘ಸೀಳು ಆರೈಕೆ ಮಾರ್ಗದರ್ಶನ ಕಾರ್ಯಕ್ರಮ’ಕ್ಕೆ ಅನುಮೋದನೆ ನೀಡಿದೆ. </p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯನಿರ್ವಾಹಕ ನಿರ್ದೇಶಕರು ಕಾರ್ಯಕ್ರಮದ ಉಸ್ತುವಾರಿ ವಹಿಸಲಿದ್ದಾರೆ. </p>.<p>ಕಳೆದ ಐದು ವರ್ಷಗಳಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ಎಬಿಎಆರ್ಕೆ) ಯೋಜನೆಯಡಿ ಕೇವಲ 20 ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರಚಿಕಿತ್ಸೆ ಕಾರ್ಯವಿಧಾನಗಳನ್ನು ನಡೆಸಲಾಗಿದೆ. ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳು ಯೋಜನೆಯಡಿ ಈ ಕಾರ್ಯವಿಧಾನವನ್ನು ನಡೆಸುತ್ತಿವೆ. ಈ ಚಿಕಿತ್ಸೆಯನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ‘ಸೀಳು ಆರೈಕೆ ಮಾರ್ಗದರ್ಶನ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ. </p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಮೂಲಸೌಕರ್ಯಗಳನ್ನು ಗುರುತಿಸಿ, ಅಲ್ಲಿ ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳು ಅಥವಾ ಮಾನವ ಸಂಪನ್ಮೂಲವನ್ನು ಒದಗಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಸೂಚಿಸಲಾಗಿದೆ.</p>.<p>ತಾಂತ್ರಿಕ ತಜ್ಞರ ಸಮಿತಿಯು ನಿರ್ಧರಿಸಿದಂತೆ, ಅರ್ಹತಾ ಮಾನದಂಡಗಳ ಆಧಾರದ ಮೇಲೆ ಮಾರ್ಗದರ್ಶಕ ಶಸ್ತ್ರಚಿಕಿತ್ಸಕರ ಗುಂಪನ್ನು ಸಿದ್ಧಪಡಿಸಬೇಕು. ಫಲಾನುಭವಿಗಳಿಗೆ ಮಾರ್ಗದರ್ಶಕ ಶಸ್ತ್ರಚಿಕಿತ್ಸಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ನೀಡುವ ಜತೆಗೆ ಇತರ ಶಸ್ತ್ರಚಿಕಿತ್ಸಕರಿಗೆ ತರಬೇತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರಚಿಕಿತ್ಸೆ ಸಾಮರ್ಥ್ಯ ಹೆಚ್ಚಿಸಲು ರಾಜ್ಯ ಸರ್ಕಾರವು ‘ಸೀಳು ಆರೈಕೆ ಮಾರ್ಗದರ್ಶನ ಕಾರ್ಯಕ್ರಮ’ಕ್ಕೆ ಅನುಮೋದನೆ ನೀಡಿದೆ. </p>.<p>ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯನಿರ್ವಾಹಕ ನಿರ್ದೇಶಕರು ಕಾರ್ಯಕ್ರಮದ ಉಸ್ತುವಾರಿ ವಹಿಸಲಿದ್ದಾರೆ. </p>.<p>ಕಳೆದ ಐದು ವರ್ಷಗಳಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ಎಬಿಎಆರ್ಕೆ) ಯೋಜನೆಯಡಿ ಕೇವಲ 20 ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರಚಿಕಿತ್ಸೆ ಕಾರ್ಯವಿಧಾನಗಳನ್ನು ನಡೆಸಲಾಗಿದೆ. ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳು ಯೋಜನೆಯಡಿ ಈ ಕಾರ್ಯವಿಧಾನವನ್ನು ನಡೆಸುತ್ತಿವೆ. ಈ ಚಿಕಿತ್ಸೆಯನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ‘ಸೀಳು ಆರೈಕೆ ಮಾರ್ಗದರ್ಶನ ಕಾರ್ಯಕ್ರಮ’ ಹಮ್ಮಿಕೊಳ್ಳಲಾಗಿದೆ. </p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಮೂಲಸೌಕರ್ಯಗಳನ್ನು ಗುರುತಿಸಿ, ಅಲ್ಲಿ ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳು ಅಥವಾ ಮಾನವ ಸಂಪನ್ಮೂಲವನ್ನು ಒದಗಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಗೆ ಸೂಚಿಸಲಾಗಿದೆ.</p>.<p>ತಾಂತ್ರಿಕ ತಜ್ಞರ ಸಮಿತಿಯು ನಿರ್ಧರಿಸಿದಂತೆ, ಅರ್ಹತಾ ಮಾನದಂಡಗಳ ಆಧಾರದ ಮೇಲೆ ಮಾರ್ಗದರ್ಶಕ ಶಸ್ತ್ರಚಿಕಿತ್ಸಕರ ಗುಂಪನ್ನು ಸಿದ್ಧಪಡಿಸಬೇಕು. ಫಲಾನುಭವಿಗಳಿಗೆ ಮಾರ್ಗದರ್ಶಕ ಶಸ್ತ್ರಚಿಕಿತ್ಸಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ನೀಡುವ ಜತೆಗೆ ಇತರ ಶಸ್ತ್ರಚಿಕಿತ್ಸಕರಿಗೆ ತರಬೇತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>